22.5 C
ಪುತ್ತೂರು, ಬೆಳ್ತಂಗಡಿ
March 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಫೆಬ್ರವರಿ 2025 ರಲ್ಲಿ ನಡೆಸಿದ ದ್ವಿತೀಯ ಹಾಗೂ ಚತುರ್ಥ ಸೆಮಿಸ್ಟರ್ ಬಿ.ಎಡ್. ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಫಲಿತಾಂಶ ಬಂದಿರುತ್ತದೆ.

ದ್ವಿತೀಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಒಟ್ಟು49 ವಿದ್ಯಾರ್ಥಿಗಳಲ್ಲಿ 47 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 02 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುತ್ತಾರೆ. ಅಖಿಲಾ ಎಂ ಪಿ 574 (95..67%) ಪಡೆದು ಪ್ರಥಮ ಸ್ಥಾನವನ್ನು, ವಿಸ್ಮಿತಾ 555 (92.50%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಹಾಗೂ ದಿವ್ಯಾ ಕೆ ಎಸ್ 548 (91.33%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


ಹಾಗೆಯೇ ಚತುರ್ಥ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಒಟ್ಟು50 ವಿದ್ಯಾರ್ಥಿಗಳಲ್ಲಿ ಎಲ್ಲಾ 50 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ವಿನಿತ್ ಲ್ಯಾನ್ಸನ್ ಸಿಕ್ವೇರಾ 581 (96.83%) ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು, ರಶ್ಮಿ ಕೆ 578 (96.33%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು, ಭಾರ್ಗವಿ ಹಾಗೂ ವಿಜಯಲಕ್ಷ್ಮಿ ನಾಯಕ್ 575 (92.83%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ ಅವರಿಗೆ ಶುಭವನ್ನು ಹಾರೈಸಿರುತ್ತಾರೆ.

Related posts

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya
error: Content is protected !!