May 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಫೆಬ್ರವರಿ 2025 ರಲ್ಲಿ ನಡೆಸಿದ ದ್ವಿತೀಯ ಹಾಗೂ ಚತುರ್ಥ ಸೆಮಿಸ್ಟರ್ ಬಿ.ಎಡ್. ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಫಲಿತಾಂಶ ಬಂದಿರುತ್ತದೆ.

ದ್ವಿತೀಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಒಟ್ಟು49 ವಿದ್ಯಾರ್ಥಿಗಳಲ್ಲಿ 47 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 02 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುತ್ತಾರೆ. ಅಖಿಲಾ ಎಂ ಪಿ 574 (95..67%) ಪಡೆದು ಪ್ರಥಮ ಸ್ಥಾನವನ್ನು, ವಿಸ್ಮಿತಾ 555 (92.50%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಹಾಗೂ ದಿವ್ಯಾ ಕೆ ಎಸ್ 548 (91.33%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


ಹಾಗೆಯೇ ಚತುರ್ಥ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಒಟ್ಟು50 ವಿದ್ಯಾರ್ಥಿಗಳಲ್ಲಿ ಎಲ್ಲಾ 50 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ವಿನಿತ್ ಲ್ಯಾನ್ಸನ್ ಸಿಕ್ವೇರಾ 581 (96.83%) ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು, ರಶ್ಮಿ ಕೆ 578 (96.33%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು, ಭಾರ್ಗವಿ ಹಾಗೂ ವಿಜಯಲಕ್ಷ್ಮಿ ನಾಯಕ್ 575 (92.83%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ ಅವರಿಗೆ ಶುಭವನ್ನು ಹಾರೈಸಿರುತ್ತಾರೆ.

Related posts

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya
error: Content is protected !!