September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ವಹಿಸಿದ್ದರು.

ಸಭೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುರೇಖ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಮಾಜಿ ತಾಲೂಕು ಪಂಚಾಯತಿ ಸದಸ್ಯೆ , ಮಾಜಿ ಮಹಿಳಾ ಮಂಡಲ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಭಾರತಿ ಹೆಬ್ಬಾರ್ , ಹಿರಿಯರಾದ ಶ್ರೀಮತಿ ವರದಾಬಾಯಿ ಉಪಸ್ಥಿತರಿದ್ದರು.

ಗ್ರಾಮದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಾಲ್ಕು ಜನ ಮಹಿಳೆಯರಾದ ಶ್ರೀಮತಿ ಭಾರತಿ ಹೆಬ್ಬಾರ್, ಶ್ರೀಮತಿ ರುಕ್ಮಿನಿ ಲೋಕಯ್ಯ ಗೌಡ, ಗಾಯತ್ರಿ ಕೂಸಪ್ಪ ಮಲೆಕುಡಿಯ , ಶ್ರೀಮತಿ ಲಿಸಿ ಜೋರ್ಜ್ ರವರನ್ನು ಸ್ಮರಣಿಕೆಯೊಂದಿಗೆ ಸೀರೆ ಹೊದಿಸಿ ಸನ್ಮಾನಿಸಲಾಯಿತು.

ಸೀಬಾ ಜೋರ್ಜ್, ಸೌಮ್ಯ ನಾಯ್ಕ, ಶ್ರೀಮತಿ ಡೀಕಮ್ಮ, ಶ್ರೀಮತಿ ರೋಸಮ್ಮ , ಶ್ರೀಮತಿ ವಸಂತಿ, ಶ್ರೀಮತಿ ಭವ್ಯಶ್ರೀ ಕಾರ್ಯಕ್ರಮದಲ್ಲಿ ಸಹಕರಿಸಿದರು. ಶ್ರೀಮತಿ ರಮಾ ಪರಂಜಪೆ ಸ್ವಾಗತಿಸಿದರು. ಶ್ರೀಮತಿ ಭಾರತೀ ಉದ್ಧಾರ ನಿರೂಪಿಸಿ, ಶ್ರೀಮತಿ ನಳಿನಿ ವಂದಿಸಿದರು.

Related posts

ಮಡಂತ್ಯಾರು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ 168 ಕೋಟಿ ವ್ಯವಹಾರ-ರೂ 71.63 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya
error: Content is protected !!