25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.27 ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ಸ್ವಯಂ ಆಸಕ್ತಿಯಿಂದ ದೆಹಲಿಗೆ ತೆರಳಿ, ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದಾರೆ.

ಸರ್ಕಾರದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಘಟಿತ ಪ್ರಯತ್ನದ ಫಲವಾಗಿ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಇಂದು ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ ಎಂದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya
error: Content is protected !!