ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.27 ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ಸ್ವಯಂ ಆಸಕ್ತಿಯಿಂದ ದೆಹಲಿಗೆ ತೆರಳಿ, ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದಾರೆ.

ಸರ್ಕಾರದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಘಟಿತ ಪ್ರಯತ್ನದ ಫಲವಾಗಿ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಇಂದು ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ ಎಂದರು.

Related posts

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya

ಪಡಂಗಡಿಯಲ್ಲಿ ಮಧ್ಯವರ್ಜನ ಶಿಬಿರ ಉದ್ಘಾಟನೆ

Suddi Udaya

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya
error: Content is protected !!