25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.27 ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ಸ್ವಯಂ ಆಸಕ್ತಿಯಿಂದ ದೆಹಲಿಗೆ ತೆರಳಿ, ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದಾರೆ.

ಸರ್ಕಾರದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಘಟಿತ ಪ್ರಯತ್ನದ ಫಲವಾಗಿ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಇಂದು ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ ಎಂದರು.

Related posts

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!