March 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

ಇಳಂತಿಲ : ಇಳಂತಿಲ ಗ್ರಾ.ಪಂ.ನ ಅಧ್ಯಕ್ಷ ತಿಮ್ಮಪ್ಪ ಗೌಡ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರ ಅಧ್ಯಕ್ಷತೆಯಲ್ಲಿ ಇಳಂತಿಲ ಗ್ರಾ.ಪಂ. ಕಚೇರಿಯಲ್ಲಿ ಮಾ.18 ರಂದು ನಡೆಯಿತು.

ಗ್ರಾ.ಪಂ.ನ 12 ಮಂದಿ ಸದಸ್ಯರು ಅವಿಶ್ವಾಸದ ನಿರ್ಣಯ ಸೂಚನಾ ಸಭೆಯಲ್ಲಿ ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದ್ದಾರೆ. ಇದರಿಂದ ತಿಮ್ಮಪ್ಪ ಗೌಡ ಅವರು ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಕಳೆದುಕೊಳ್ಳುವಂತಾಗಿದೆ. ಅಧ್ಯಕ್ಷರ ಪರ ಓರ್ವ ಸದಸ್ಯ ಮಾತ್ರ ಮತ ಚಲಾಯಿಸಿದ್ದಾರೆ.

ಕಳೆದ ಫೆ.20ರಂದು ಇಳಂತಿಲ ಗ್ರಾ.ಪಂ. ಸದಸ್ಯರಾದ ವಸಂತ ಕುಮಾರ್, ವಿಜಯಕುಮಾರ್, ಚಂದ್ರಿಕಾ ಭಟ್, ಉಷಾ ಯು., ಸುಪ್ರೀತ್ ಪಿ., ಸಿದ್ದೀಕ್, ಯು.ಕೆ. ಈಸುಬು, ಕುಸುಮ, ನುಸ್ರುತ್ ಹೀಗೆ 9 ಮಂದಿ ಸದಸ್ಯರು ಗ್ರಾ.ಪಂ. ಅಧ್ಯಕ್ಷ ತಿಮ್ಮಪ್ಪ ಗೌಡ ಅವರು ಗ್ರಾ.ಪಂ.ನಲ್ಲಿ ಸದಸ್ಯರುಗಳಾದ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಗ್ರಾ.ಪಂ.ನ ಹಿತವನ್ನು ಧಿಕ್ಕರಿಸಿ ತಮ್ಮ ಮನಸ್ಸೇ ಇಚ್ಚೆ ಕೆಲಸ, ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರ ವಿರುದ್ಧ ಪುತ್ತೂರು ಉಪವಿಭಾಗಾಧಿಕಾರಿ ಅವರಿಗೆ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಿದ್ದರು.

ಈ ಸಂದರ್ಭ ಅವಿಶ್ವಾಸ ಗೊತ್ತುವಳಿ ಮಂಡನೆ ಸಭೆಯಲ್ಲಿ 9 ಮಂದಿ ಸದಸ್ಯರಲ್ಲದೇ, ಗ್ರಾ.ಪಂ. ಉಪಾಧ್ಯಕ್ಷೆ ಸವಿತಾ, ಉಷಾ ಎಂ. ಜಾನಕಿ ಅವರು ಅಧ್ಯಕ್ಷರ ವಿರುದ್ಧ ಕೈ ಎತ್ತುವ ಮೂಲಕ ಮತ ಚಲಾಯಿಸಿದ್ದಾರೆ. ಅಧ್ಯಕ್ಷರ ಪರ ಗ್ರಾ.ಪಂ. ಸದಸ್ಯರಾಗಿರುವ ರಮೇಶ ಮಾತ್ರ ಇದ್ದರು. 14 ಮಂದಿ ಸದಸ್ಯರಿರುವ ಇಳಂತಿಲ ಗ್ರಾ.ಪಂ.ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು 11, ಕಾಂಗ್ರೆಸ್ ಬೆಂಬಲಿತ ಸದಸ್ಯರು ಇಬ್ಬರು ಹಾಗೂ ಎಸ್‌ಡಿಪಿಐ ಬೆಂಬಲಿತ ಸದಸ್ಯರು ಒಬ್ಬರು ಇದ್ದಾರೆ. ಇಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿರುವ ತಿಮ್ಮಪ್ಪ ಗೌಡರ ವಿರುದ್ಧವೇ 9 ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ತಿರುಗಿ ಬಿದ್ದಂತಾಗಿದೆ. ಅವಿಶ್ವಾಸದ ನಿರ್ಣಯ ಸೂಚನಾ ಸಭೆಯಲ್ಲಿ ಮೂವರಲ್ಲಿ ಎರಡು ಭಾಗದಷ್ಟು ಸದಸ್ಯರು ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದಾಗ ಮಾತ್ರ ಅಧ್ಯಕ್ಷರು ತನ್ನ ಸ್ಥಾನ ಕಳೆದುಕೊಳ್ಳಲು ಸಾಧ್ಯ. 14 ಮಂದಿ ಸದಸ್ಯ ಬಲದ ಈ ಗ್ರಾ.ಪಂ.ನಲ್ಲಿ ಅಧ್ಯಕ್ಷರು ತನ್ನ ಸ್ಥಾನ ಕಳೆದುಕೊಳ್ಳಲು 10 ಮಂದಿ ಸದಸ್ಯರು ಅಧ್ಯಕ್ಷರ ವಿರುದ್ಧ ಮತ ಚಲಾಯಿಸಬೇಕಿತ್ತು. ಆದರೆ ಇಲ್ಲಿ 12 ಮಂದಿ ಸದಸ್ಯರು ಅಧ್ಯಕ್ಷರ ವಿರುದ್ಧ ಮತ ಚಲಾಯಸಿದ್ದಾರೆ.

ಸಭೆಯಲ್ಲಿ ಗ್ರಾ.ಪಂ. ಪಿಡಿಒ ಸುಮಯ್ಯ, ಕಾರ್ಯದರ್ಶಿ ವಿಜಯ ಉಪಸ್ಥಿತರಿದ್ದರು.

Related posts

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya
error: Content is protected !!