September 6, 2026
Uncategorized

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌, ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ ಉಜಿರೆಗೆ ಪ್ರವೇಶಿಸಿದೆ.

ಬೆಳಾಲು ಕ್ರಾಸ್ ಬಳಿ ಭವ್ಯ ಸ್ವಾಗತ ಕೋರಲಾಯಿತು. ಹಿಂದೂ ಮುಖಂಡರು ಹಾಗೂ ಆರ್. ಎಸ್. ಎಸ್ ಮುಖಂಡರು, ಉದ್ಯಮಿಗಳು, ಸಾರ್ವಜನಿಕರು ಒಟ್ಟಾಗಿ ಸೇರಿ ನಂದಿ ರಥಕ್ಕೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು.

ನಂತರ ಚೆಂಡೆ, ಕುಣಿತ ಭಜನೆ ಮೂಲಕ ಭವ್ಯವಾದ ಮೆರವಣಿಗೆಯೊಂದಿಗೆ ಉಜಿರೆ ಜನಾರ್ದನ ದೇವಸ್ಥಾನದ ಮುಂಭಾಗ ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ರವರು ಹಾಗೂ ತಾಲೂಕು ನಂದಿ ರಥಯಾತ್ರೆ ಸಂಚಾಲನ ಸಮಿತಿಯವರು ನಂದಿಗೆ ಹೂ ಹಾರ ಹಾಕಿ ಸ್ವಾಗತಿಸಿದರು. ಬಳಿಕ ಶಾರದ ಮಂಟಪದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ನಡೆದು ಸಭಾ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ವಹಿಸಿದ್ದರು. ರಾಧಾ ಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನದ ಅಧ್ಯಕ್ಷ ಭಕ್ತಿ ಭೂಷಣ್ ದಾಸ್ ರವರು ದಿಕ್ಸುಚಿ ಭಾಷಣ ನೆರವೇರಿಸಿದರು.

ವೇದಿಕೆಯಲ್ಲಿ ಕಳಂಜ ನಂದಗೋಕುಲ ಸ್ವಾಮಿಶ್ರೀ ವಿವೇಕಾನಂದ ಸೇವಾಶ್ರಮದ ಅಧ್ಯಕ್ಷ ಡಾ| ಎಂ.ಎಂ. ದಯಾಕರ್,ನಂದಿ ರಥಯಾತ್ರೆಗೆ ಚಾಲನೆ ನೀಡಿದಂತಹ ದೇಸೀ ಗೋಸಂರಕ್ಷಕರಮೇಶ್ ಎಸ್. ಬೆಳ್ತಂಗಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಹ ಕಾರ್ಯವಾಹ ಸುಭಾಷ್ ಕಳಂಜ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉದ್ಯಮಿಗಳಾದ ಪದ್ಮನಾಭ ಶೆಟ್ಟಿಗಾರ್, ರಾಮಚಂದ್ರ ಶೆಟ್ಟಿ, ಪ್ರಶಾಂತ್ ಜೈನ್, ಭರತ್, ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್ ಬರಮೇಲು ವರ್ತಕರ ಸಂಘದ ಅರವಿಂದ ಕಾರಂತ್, ರವೀಂದ್ರ ಶೆಟ್ಟಿ ಬಳಂಜ, ಯಕ್ಷಗಾನ ಭಾಗವತ ಮಹೇಶ್ ಕನ್ಯಾಡಿ, ಶಶಿಧರ ಕಲ್ಮ0ಜ, ಸೋಮಶೇಖರ್ ಶೆಟ್ಟಿ, ವಿಶ್ವಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರು, ಇನ್ನಿತರರು ಉಪಸ್ಥಿತರಿದ್ದರು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಸ್ವಾಗತಿಸಿದರು. ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯಾಧ್ಯಕ್ಷ ನವೀನ್ ನೆರಿಯ ನಿರೂಪಿಸಿದರು.

Related posts

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!