March 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಮಂಗಳೂರು ಏನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಇದರ ಅಂತಿಮ ವರ್ಷದ ಎಂಬಿಎ ಮತ್ತು ಸಿಎಂಎ ವಿದ್ಯಾರ್ಥಿ ಮುಹಮ್ಮದ್ ನಿಶ್ವಾನ್ ಅವರು 2022- 23ನೇ ಸಾಲಿನ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಮಾ. 17ರಂದು ರಾಜ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಅವರು ಉಜಿರೆ ಗಾಂಧಿ ನಗರದ ನಿವಾಸಿಯಾಗಿದ್ದು ಉಸ್ಮಾನ್ ಹಾಗೂ ನಫೀಸಾ ಶೀಬಾ ದಂಪತಿಯ ಪುತ್ರ. ಬಹುಮುಖ ಪ್ರತಿಭೆಗಾಗಿ ಗುರುತಿಸಿಕೊಂಡಿದ್ದಾರೆ. ಕಾಲೇಜಿನ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಆಗಿಯೂ ಇವರು ಗೌರವಕ್ಕೆ ಪಾತ್ರರಾಗಿದ್ದಾರೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಸಭಾ ಸಭಾಪತಿ ಯುಟಿ ಖಾದರ್, ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಮತ್ತು ವಿ.ಪ.ಮಾಜಿ ಸದಸ್ಯ ಕೆ ಹರೀಶ್ ಕುಮಾರ್, ಮಹಮ್ಮದ್ ನಿಶ್ವಾನ್ ಅಭಿನಂದಿಸಿ ಶುಭ ಹಾರೈಸಿದರು.

Related posts

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!