ಬೆಳ್ತಂಗಡಿ: ಮಂಗಳೂರು ಏನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಇದರ ಅಂತಿಮ ವರ್ಷದ ಎಂಬಿಎ ಮತ್ತು ಸಿಎಂಎ ವಿದ್ಯಾರ್ಥಿ ಮುಹಮ್ಮದ್ ನಿಶ್ವಾನ್ ಅವರು 2022- 23ನೇ ಸಾಲಿನ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಮಾ. 17ರಂದು ರಾಜ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.


ಅವರು ಉಜಿರೆ ಗಾಂಧಿ ನಗರದ ನಿವಾಸಿಯಾಗಿದ್ದು ಉಸ್ಮಾನ್ ಹಾಗೂ ನಫೀಸಾ ಶೀಬಾ ದಂಪತಿಯ ಪುತ್ರ. ಬಹುಮುಖ ಪ್ರತಿಭೆಗಾಗಿ ಗುರುತಿಸಿಕೊಂಡಿದ್ದಾರೆ. ಕಾಲೇಜಿನ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಆಗಿಯೂ ಇವರು ಗೌರವಕ್ಕೆ ಪಾತ್ರರಾಗಿದ್ದಾರೆ.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಸಭಾ ಸಭಾಪತಿ ಯುಟಿ ಖಾದರ್, ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಮತ್ತು ವಿ.ಪ.ಮಾಜಿ ಸದಸ್ಯ ಕೆ ಹರೀಶ್ ಕುಮಾರ್, ಮಹಮ್ಮದ್ ನಿಶ್ವಾನ್ ಅಭಿನಂದಿಸಿ ಶುಭ ಹಾರೈಸಿದರು.