22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಮಂಗಳೂರು ಏನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಇದರ ಅಂತಿಮ ವರ್ಷದ ಎಂಬಿಎ ಮತ್ತು ಸಿಎಂಎ ವಿದ್ಯಾರ್ಥಿ ಮುಹಮ್ಮದ್ ನಿಶ್ವಾನ್ ಅವರು 2022- 23ನೇ ಸಾಲಿನ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಮಾ. 17ರಂದು ರಾಜ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಅವರು ಉಜಿರೆ ಗಾಂಧಿ ನಗರದ ನಿವಾಸಿಯಾಗಿದ್ದು ಉಸ್ಮಾನ್ ಹಾಗೂ ನಫೀಸಾ ಶೀಬಾ ದಂಪತಿಯ ಪುತ್ರ. ಬಹುಮುಖ ಪ್ರತಿಭೆಗಾಗಿ ಗುರುತಿಸಿಕೊಂಡಿದ್ದಾರೆ. ಕಾಲೇಜಿನ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಆಗಿಯೂ ಇವರು ಗೌರವಕ್ಕೆ ಪಾತ್ರರಾಗಿದ್ದಾರೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಸಭಾ ಸಭಾಪತಿ ಯುಟಿ ಖಾದರ್, ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಮತ್ತು ವಿ.ಪ.ಮಾಜಿ ಸದಸ್ಯ ಕೆ ಹರೀಶ್ ಕುಮಾರ್, ಮಹಮ್ಮದ್ ನಿಶ್ವಾನ್ ಅಭಿನಂದಿಸಿ ಶುಭ ಹಾರೈಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya
error: Content is protected !!