37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಫೆಬ್ರವರಿ 2025 ರಲ್ಲಿ ನಡೆಸಿದ ದ್ವಿತೀಯ ಹಾಗೂ ಚತುರ್ಥ ಸೆಮಿಸ್ಟರ್ ಬಿ.ಎಡ್. ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಫಲಿತಾಂಶ ಬಂದಿರುತ್ತದೆ.

ದ್ವಿತೀಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಒಟ್ಟು49 ವಿದ್ಯಾರ್ಥಿಗಳಲ್ಲಿ 47 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 02 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುತ್ತಾರೆ. ಅಖಿಲಾ ಎಂ ಪಿ 574 (95..67%) ಪಡೆದು ಪ್ರಥಮ ಸ್ಥಾನವನ್ನು, ವಿಸ್ಮಿತಾ 555 (92.50%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಹಾಗೂ ದಿವ್ಯಾ ಕೆ ಎಸ್ 548 (91.33%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


ಹಾಗೆಯೇ ಚತುರ್ಥ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಒಟ್ಟು50 ವಿದ್ಯಾರ್ಥಿಗಳಲ್ಲಿ ಎಲ್ಲಾ 50 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ವಿನಿತ್ ಲ್ಯಾನ್ಸನ್ ಸಿಕ್ವೇರಾ 581 (96.83%) ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು, ರಶ್ಮಿ ಕೆ 578 (96.33%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು, ಭಾರ್ಗವಿ ಹಾಗೂ ವಿಜಯಲಕ್ಷ್ಮಿ ನಾಯಕ್ 575 (92.83%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ ಅವರಿಗೆ ಶುಭವನ್ನು ಹಾರೈಸಿರುತ್ತಾರೆ.

Related posts

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya
error: Content is protected !!