September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಫೆಬ್ರವರಿ 2025 ರಲ್ಲಿ ನಡೆಸಿದ ದ್ವಿತೀಯ ಹಾಗೂ ಚತುರ್ಥ ಸೆಮಿಸ್ಟರ್ ಬಿ.ಎಡ್. ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಫಲಿತಾಂಶ ಬಂದಿರುತ್ತದೆ.

ದ್ವಿತೀಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಒಟ್ಟು49 ವಿದ್ಯಾರ್ಥಿಗಳಲ್ಲಿ 47 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 02 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುತ್ತಾರೆ. ಅಖಿಲಾ ಎಂ ಪಿ 574 (95..67%) ಪಡೆದು ಪ್ರಥಮ ಸ್ಥಾನವನ್ನು, ವಿಸ್ಮಿತಾ 555 (92.50%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಹಾಗೂ ದಿವ್ಯಾ ಕೆ ಎಸ್ 548 (91.33%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


ಹಾಗೆಯೇ ಚತುರ್ಥ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಒಟ್ಟು50 ವಿದ್ಯಾರ್ಥಿಗಳಲ್ಲಿ ಎಲ್ಲಾ 50 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ವಿನಿತ್ ಲ್ಯಾನ್ಸನ್ ಸಿಕ್ವೇರಾ 581 (96.83%) ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು, ರಶ್ಮಿ ಕೆ 578 (96.33%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು, ಭಾರ್ಗವಿ ಹಾಗೂ ವಿಜಯಲಕ್ಷ್ಮಿ ನಾಯಕ್ 575 (92.83%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ ಅವರಿಗೆ ಶುಭವನ್ನು ಹಾರೈಸಿರುತ್ತಾರೆ.

Related posts

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya
error: Content is protected !!