March 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ವಹಿಸಿದ್ದರು.

ಸಭೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುರೇಖ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಮಾಜಿ ತಾಲೂಕು ಪಂಚಾಯತಿ ಸದಸ್ಯೆ , ಮಾಜಿ ಮಹಿಳಾ ಮಂಡಲ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಭಾರತಿ ಹೆಬ್ಬಾರ್ , ಹಿರಿಯರಾದ ಶ್ರೀಮತಿ ವರದಾಬಾಯಿ ಉಪಸ್ಥಿತರಿದ್ದರು.

ಗ್ರಾಮದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಾಲ್ಕು ಜನ ಮಹಿಳೆಯರಾದ ಶ್ರೀಮತಿ ಭಾರತಿ ಹೆಬ್ಬಾರ್, ಶ್ರೀಮತಿ ರುಕ್ಮಿನಿ ಲೋಕಯ್ಯ ಗೌಡ, ಗಾಯತ್ರಿ ಕೂಸಪ್ಪ ಮಲೆಕುಡಿಯ , ಶ್ರೀಮತಿ ಲಿಸಿ ಜೋರ್ಜ್ ರವರನ್ನು ಸ್ಮರಣಿಕೆಯೊಂದಿಗೆ ಸೀರೆ ಹೊದಿಸಿ ಸನ್ಮಾನಿಸಲಾಯಿತು.

ಸೀಬಾ ಜೋರ್ಜ್, ಸೌಮ್ಯ ನಾಯ್ಕ, ಶ್ರೀಮತಿ ಡೀಕಮ್ಮ, ಶ್ರೀಮತಿ ರೋಸಮ್ಮ , ಶ್ರೀಮತಿ ವಸಂತಿ, ಶ್ರೀಮತಿ ಭವ್ಯಶ್ರೀ ಕಾರ್ಯಕ್ರಮದಲ್ಲಿ ಸಹಕರಿಸಿದರು. ಶ್ರೀಮತಿ ರಮಾ ಪರಂಜಪೆ ಸ್ವಾಗತಿಸಿದರು. ಶ್ರೀಮತಿ ಭಾರತೀ ಉದ್ಧಾರ ನಿರೂಪಿಸಿ, ಶ್ರೀಮತಿ ನಳಿನಿ ವಂದಿಸಿದರು.

Related posts

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya
error: Content is protected !!