25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.27 ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ಸ್ವಯಂ ಆಸಕ್ತಿಯಿಂದ ದೆಹಲಿಗೆ ತೆರಳಿ, ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದಾರೆ.

ಸರ್ಕಾರದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಘಟಿತ ಪ್ರಯತ್ನದ ಫಲವಾಗಿ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಇಂದು ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ ಎಂದರು.

Related posts

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!