March 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.27 ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ಸ್ವಯಂ ಆಸಕ್ತಿಯಿಂದ ದೆಹಲಿಗೆ ತೆರಳಿ, ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದಾರೆ.

ಸರ್ಕಾರದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಘಟಿತ ಪ್ರಯತ್ನದ ಫಲವಾಗಿ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಇಂದು ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ ಎಂದರು.

Related posts

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!