25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

ರೆಖ್ಯ : ಇಲ್ಲಿಯ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಜರಿದು ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಲು ಶಾಸಕ ಹರೀಶ್ ಪೂಂಜ ಇವರ ಸೂಚನೆಯಂತೆ ಗುತ್ತಿಗೆದಾರರಾದ ದಿಶಂತ್ ಕುಮಾರ್ ಇವರು ಮಣ್ಣು ತೆರವು ಕಾರ್ಯ ಪ್ರಾರಂಭಿಸಿದರು.


ದಿನಾಂಕ 30-07-2024 ರಾತ್ರಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಗುಡ್ಡ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸುತ್ತು ಗೋಪುರ ಮತ್ತು ದೇವಸ್ಥಾನ ಗರ್ಭ ಗುಡಿಯವರೆಗೆ ಮಣ್ಣು ಬಂದಿತ್ತು ಭಕ್ತರಲ್ಲಿ ಮತ್ತು ಗ್ರಾಮಸ್ಥರಲ್ಲಿ ಬಾರಿ ಆತಂಕ ಮೂಡಿತ್ತು. ಶಾಸಕರು ಮಳೆಗಾಲದಲ್ಲಿ ಕೊಟ್ಟ ಮಾತಿನಂತೆ ಮಣ್ಣು ತೆರವುಗೊಳಿಸಲು ಪ್ರಾರಂಭ ಮಾಡಿರುವುದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅರಿಸಿನಮಕ್ಕಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ನವೀನ್ ರೆಖ್ಯ, ದೇವಸ್ಥಾನ ಸಮಿತಿಯ ಲಕ್ಷ್ಮಣ
ಗೌಡ ಕನ್ನಯಂಡ, ರವಿಂದ್ರ ಗೌಡ ಕೊಲಾರು ಮುಂತಾದವರು ಉಪಸ್ಥಿತರಿದ್ದರು.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya
error: Content is protected !!