25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

ಕಾಶಿಪಟ್ಣ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಇಲ್ಲಿಯ ಕುಜಂಬೆ ಮನೆ ನಿವಾಸಿ ವಿಲ್ಪ್ರೇಡ್ ಫೆರ್ನಾಂಡಿಸ್ (51ವ) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.18ರಂದು ವರದಿಯಾಗಿದೆ.
ಇವರು ಸುಮಾರು 3-4 ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಪಟ್ಟು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾ.೧೪ರಂದು ಬೆಳಿಗ್ಗೆ ತಮ್ಮ ಮನೆಯ ಸಮೀಪದ ತೋಟದಲ್ಲಿ ಲವಂಗ ಮರದ ರೆಂಬೆಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರ ಸಹೋದರ ಕ್ಲಿಫರ್ಡ್ ಫೆರ್ನಾಂಡಿಸ್ ಹಾಗೂ ಕೆಲಸದಾಳು ಹರೀಶ್ ಶೆಟ್ಟಿ ಎಂಬವರು ಓಡಿ ಹೋಗಿ ಹಗ್ಗವನ್ನು ತುಂಡರಿಸಿ ಅವರನ್ನು ಉಪಚರಿಸಿ ಮೂಡಬಿದ್ರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಾ.18ರಂದು ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya
error: Content is protected !!