25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

ಕಾಶಿಪಟ್ಣ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಇಲ್ಲಿಯ ಕುಜಂಬೆ ಮನೆ ನಿವಾಸಿ ವಿಲ್ಪ್ರೇಡ್ ಫೆರ್ನಾಂಡಿಸ್ (51ವ) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.18ರಂದು ವರದಿಯಾಗಿದೆ.
ಇವರು ಸುಮಾರು 3-4 ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಪಟ್ಟು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾ.೧೪ರಂದು ಬೆಳಿಗ್ಗೆ ತಮ್ಮ ಮನೆಯ ಸಮೀಪದ ತೋಟದಲ್ಲಿ ಲವಂಗ ಮರದ ರೆಂಬೆಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರ ಸಹೋದರ ಕ್ಲಿಫರ್ಡ್ ಫೆರ್ನಾಂಡಿಸ್ ಹಾಗೂ ಕೆಲಸದಾಳು ಹರೀಶ್ ಶೆಟ್ಟಿ ಎಂಬವರು ಓಡಿ ಹೋಗಿ ಹಗ್ಗವನ್ನು ತುಂಡರಿಸಿ ಅವರನ್ನು ಉಪಚರಿಸಿ ಮೂಡಬಿದ್ರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಾ.18ರಂದು ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya
error: Content is protected !!