Uncategorized

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

ಕಾಶಿಪಟ್ಣ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಇಲ್ಲಿಯ ಕುಜಂಬೆ ಮನೆ ನಿವಾಸಿ ವಿಲ್ಪ್ರೇಡ್ ಫೆರ್ನಾಂಡಿಸ್ (51ವ) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.18ರಂದು ವರದಿಯಾಗಿದೆ.
ಇವರು ಸುಮಾರು 3-4 ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಪಟ್ಟು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾ.೧೪ರಂದು ಬೆಳಿಗ್ಗೆ ತಮ್ಮ ಮನೆಯ ಸಮೀಪದ ತೋಟದಲ್ಲಿ ಲವಂಗ ಮರದ ರೆಂಬೆಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರ ಸಹೋದರ ಕ್ಲಿಫರ್ಡ್ ಫೆರ್ನಾಂಡಿಸ್ ಹಾಗೂ ಕೆಲಸದಾಳು ಹರೀಶ್ ಶೆಟ್ಟಿ ಎಂಬವರು ಓಡಿ ಹೋಗಿ ಹಗ್ಗವನ್ನು ತುಂಡರಿಸಿ ಅವರನ್ನು ಉಪಚರಿಸಿ ಮೂಡಬಿದ್ರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಾ.18ರಂದು ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya
error: Content is protected !!