22.5 C
ಪುತ್ತೂರು, ಬೆಳ್ತಂಗಡಿ
March 19, 2025
Uncategorized

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌, ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ ಉಜಿರೆಗೆ ಪ್ರವೇಶಿಸಿದೆ.

ಬೆಳಾಲು ಕ್ರಾಸ್ ಬಳಿ ಭವ್ಯ ಸ್ವಾಗತ ಕೋರಲಾಯಿತು. ಹಿಂದೂ ಮುಖಂಡರು ಹಾಗೂ ಆರ್. ಎಸ್. ಎಸ್ ಮುಖಂಡರು, ಉದ್ಯಮಿಗಳು, ಸಾರ್ವಜನಿಕರು ಒಟ್ಟಾಗಿ ಸೇರಿ ನಂದಿ ರಥಕ್ಕೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು.

ನಂತರ ಚೆಂಡೆ, ಕುಣಿತ ಭಜನೆ ಮೂಲಕ ಭವ್ಯವಾದ ಮೆರವಣಿಗೆಯೊಂದಿಗೆ ಉಜಿರೆ ಜನಾರ್ದನ ದೇವಸ್ಥಾನದ ಮುಂಭಾಗ ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ರವರು ಹಾಗೂ ತಾಲೂಕು ನಂದಿ ರಥಯಾತ್ರೆ ಸಂಚಾಲನ ಸಮಿತಿಯವರು ನಂದಿಗೆ ಹೂ ಹಾರ ಹಾಕಿ ಸ್ವಾಗತಿಸಿದರು. ಬಳಿಕ ಶಾರದ ಮಂಟಪದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ನಡೆದು ಸಭಾ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ವಹಿಸಿದ್ದರು. ರಾಧಾ ಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನದ ಅಧ್ಯಕ್ಷ ಭಕ್ತಿ ಭೂಷಣ್ ದಾಸ್ ರವರು ದಿಕ್ಸುಚಿ ಭಾಷಣ ನೆರವೇರಿಸಿದರು.

ವೇದಿಕೆಯಲ್ಲಿ ಕಳಂಜ ನಂದಗೋಕುಲ ಸ್ವಾಮಿಶ್ರೀ ವಿವೇಕಾನಂದ ಸೇವಾಶ್ರಮದ ಅಧ್ಯಕ್ಷ ಡಾ| ಎಂ.ಎಂ. ದಯಾಕರ್,ನಂದಿ ರಥಯಾತ್ರೆಗೆ ಚಾಲನೆ ನೀಡಿದಂತಹ ದೇಸೀ ಗೋಸಂರಕ್ಷಕರಮೇಶ್ ಎಸ್. ಬೆಳ್ತಂಗಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಹ ಕಾರ್ಯವಾಹ ಸುಭಾಷ್ ಕಳಂಜ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉದ್ಯಮಿಗಳಾದ ಪದ್ಮನಾಭ ಶೆಟ್ಟಿಗಾರ್, ರಾಮಚಂದ್ರ ಶೆಟ್ಟಿ, ಪ್ರಶಾಂತ್ ಜೈನ್, ಭರತ್, ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್ ಬರಮೇಲು ವರ್ತಕರ ಸಂಘದ ಅರವಿಂದ ಕಾರಂತ್, ರವೀಂದ್ರ ಶೆಟ್ಟಿ ಬಳಂಜ, ಯಕ್ಷಗಾನ ಭಾಗವತ ಮಹೇಶ್ ಕನ್ಯಾಡಿ, ಶಶಿಧರ ಕಲ್ಮ0ಜ, ಸೋಮಶೇಖರ್ ಶೆಟ್ಟಿ, ವಿಶ್ವಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರು, ಇನ್ನಿತರರು ಉಪಸ್ಥಿತರಿದ್ದರು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಸ್ವಾಗತಿಸಿದರು. ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯಾಧ್ಯಕ್ಷ ನವೀನ್ ನೆರಿಯ ನಿರೂಪಿಸಿದರು.

Related posts

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!