28.9 C
ಪುತ್ತೂರು, ಬೆಳ್ತಂಗಡಿ
March 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಮಂಗಳೂರು ಏನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಇದರ ಅಂತಿಮ ವರ್ಷದ ಎಂಬಿಎ ಮತ್ತು ಸಿಎಂಎ ವಿದ್ಯಾರ್ಥಿ ಮುಹಮ್ಮದ್ ನಿಶ್ವಾನ್ ಅವರು 2022- 23ನೇ ಸಾಲಿನ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಮಾ. 17ರಂದು ರಾಜ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಅವರು ಉಜಿರೆ ಗಾಂಧಿ ನಗರದ ನಿವಾಸಿಯಾಗಿದ್ದು ಉಸ್ಮಾನ್ ಹಾಗೂ ನಫೀಸಾ ಶೀಬಾ ದಂಪತಿಯ ಪುತ್ರ. ಬಹುಮುಖ ಪ್ರತಿಭೆಗಾಗಿ ಗುರುತಿಸಿಕೊಂಡಿದ್ದಾರೆ. ಕಾಲೇಜಿನ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಆಗಿಯೂ ಇವರು ಗೌರವಕ್ಕೆ ಪಾತ್ರರಾಗಿದ್ದಾರೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಸಭಾ ಸಭಾಪತಿ ಯುಟಿ ಖಾದರ್, ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಮತ್ತು ವಿ.ಪ.ಮಾಜಿ ಸದಸ್ಯ ಕೆ ಹರೀಶ್ ಕುಮಾರ್, ಮಹಮ್ಮದ್ ನಿಶ್ವಾನ್ ಅಭಿನಂದಿಸಿ ಶುಭ ಹಾರೈಸಿದರು.

Related posts

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ