27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ವಹಿಸಿದ್ದರು.

ಸಭೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುರೇಖ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಮಾಜಿ ತಾಲೂಕು ಪಂಚಾಯತಿ ಸದಸ್ಯೆ , ಮಾಜಿ ಮಹಿಳಾ ಮಂಡಲ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಭಾರತಿ ಹೆಬ್ಬಾರ್ , ಹಿರಿಯರಾದ ಶ್ರೀಮತಿ ವರದಾಬಾಯಿ ಉಪಸ್ಥಿತರಿದ್ದರು.

ಗ್ರಾಮದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಾಲ್ಕು ಜನ ಮಹಿಳೆಯರಾದ ಶ್ರೀಮತಿ ಭಾರತಿ ಹೆಬ್ಬಾರ್, ಶ್ರೀಮತಿ ರುಕ್ಮಿನಿ ಲೋಕಯ್ಯ ಗೌಡ, ಗಾಯತ್ರಿ ಕೂಸಪ್ಪ ಮಲೆಕುಡಿಯ , ಶ್ರೀಮತಿ ಲಿಸಿ ಜೋರ್ಜ್ ರವರನ್ನು ಸ್ಮರಣಿಕೆಯೊಂದಿಗೆ ಸೀರೆ ಹೊದಿಸಿ ಸನ್ಮಾನಿಸಲಾಯಿತು.

ಸೀಬಾ ಜೋರ್ಜ್, ಸೌಮ್ಯ ನಾಯ್ಕ, ಶ್ರೀಮತಿ ಡೀಕಮ್ಮ, ಶ್ರೀಮತಿ ರೋಸಮ್ಮ , ಶ್ರೀಮತಿ ವಸಂತಿ, ಶ್ರೀಮತಿ ಭವ್ಯಶ್ರೀ ಕಾರ್ಯಕ್ರಮದಲ್ಲಿ ಸಹಕರಿಸಿದರು. ಶ್ರೀಮತಿ ರಮಾ ಪರಂಜಪೆ ಸ್ವಾಗತಿಸಿದರು. ಶ್ರೀಮತಿ ಭಾರತೀ ಉದ್ಧಾರ ನಿರೂಪಿಸಿ, ಶ್ರೀಮತಿ ನಳಿನಿ ವಂದಿಸಿದರು.

Related posts

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya
error: Content is protected !!