22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ವಹಿಸಿದ್ದರು.

ಸಭೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುರೇಖ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಮಾಜಿ ತಾಲೂಕು ಪಂಚಾಯತಿ ಸದಸ್ಯೆ , ಮಾಜಿ ಮಹಿಳಾ ಮಂಡಲ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಭಾರತಿ ಹೆಬ್ಬಾರ್ , ಹಿರಿಯರಾದ ಶ್ರೀಮತಿ ವರದಾಬಾಯಿ ಉಪಸ್ಥಿತರಿದ್ದರು.

ಗ್ರಾಮದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಾಲ್ಕು ಜನ ಮಹಿಳೆಯರಾದ ಶ್ರೀಮತಿ ಭಾರತಿ ಹೆಬ್ಬಾರ್, ಶ್ರೀಮತಿ ರುಕ್ಮಿನಿ ಲೋಕಯ್ಯ ಗೌಡ, ಗಾಯತ್ರಿ ಕೂಸಪ್ಪ ಮಲೆಕುಡಿಯ , ಶ್ರೀಮತಿ ಲಿಸಿ ಜೋರ್ಜ್ ರವರನ್ನು ಸ್ಮರಣಿಕೆಯೊಂದಿಗೆ ಸೀರೆ ಹೊದಿಸಿ ಸನ್ಮಾನಿಸಲಾಯಿತು.

ಸೀಬಾ ಜೋರ್ಜ್, ಸೌಮ್ಯ ನಾಯ್ಕ, ಶ್ರೀಮತಿ ಡೀಕಮ್ಮ, ಶ್ರೀಮತಿ ರೋಸಮ್ಮ , ಶ್ರೀಮತಿ ವಸಂತಿ, ಶ್ರೀಮತಿ ಭವ್ಯಶ್ರೀ ಕಾರ್ಯಕ್ರಮದಲ್ಲಿ ಸಹಕರಿಸಿದರು. ಶ್ರೀಮತಿ ರಮಾ ಪರಂಜಪೆ ಸ್ವಾಗತಿಸಿದರು. ಶ್ರೀಮತಿ ಭಾರತೀ ಉದ್ಧಾರ ನಿರೂಪಿಸಿ, ಶ್ರೀಮತಿ ನಳಿನಿ ವಂದಿಸಿದರು.

Related posts

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಸ್ವಾಗತಿಸಿದ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!