23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

ಬೆಳ್ತಂಗಡಿ: ಯಕ್ಷಗಾನ ಮತ್ತು ಚೆಂಡೆ-ಮದ್ದಲೆ ಕಲಾವಿದ, ಯಕ್ಷಗುರು ಬಿ. ಗೋಪಾಲಕೃಷ್ಣ ಕುರುಪ್ (90) ಕಾಸರಗೊಡಿನ ನೀಲೇಶ್ವದ ಪಟ್ಟೇನದಲ್ಲಿ ಮಾ.18 ರಂದು ರಾತ್ರಿ ನಿಧನರಾಗಿದ್ದಾರೆ.

ಕೇರಳ ಮೂಲದವರಾದ ಇವರು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿ ನೆಲೆಸಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಪುತ್ರ ಇದ್ದಾರೆ.

ಚೆಂಡೆ ಮತ್ತು ಮದ್ದಲೆಯ ತಾಳ-ಲಯವನ್ನು ಮೈಗೂಡಿಸಿಕೊಂಡಿದ್ದ ಕುರುಪ್ ಅವರು ತೆಂಕು ತಿಟ್ಟಿನಲ್ಲಿ ಲಭ್ಯವಿರುವ ಅಧಿಕೃತ ಪಠ್ಯವನ್ನು ಬಳಸಿ ಪುಸ್ತಕಗಳನ್ನು ಬರೆದಿದ್ದಾರೆ. 60 ವರ್ಷಗಳಿಗೂ ಹೆಚ್ಚು ಕಾಲ ಯಕ್ಷಗಾನ ಪಾಠ ಹೇಳಿ ದೊಡ್ಡ ಶಿಷ್ಯ ಪರಂಪರೆಯನ್ನು ಬೆಳೆಸಿದ್ದರು. ಪರಂಪರೆಯ ತೆಂಕುತಿಟ್ಟಿನ ಭಾಗವತಿಕೆ ಅಥವಾ ಹಳೆಯ ಕ್ರಮದ ಪದ್ಯಗಳ ಗಾಯನದಲ್ಲಿ ಹೆಸರು ಗಳಿಸಿದ್ದರು.

Related posts

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!