September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

ಬೆಳ್ತಂಗಡಿ: ಯಕ್ಷಗಾನ ಮತ್ತು ಚೆಂಡೆ-ಮದ್ದಲೆ ಕಲಾವಿದ, ಯಕ್ಷಗುರು ಬಿ. ಗೋಪಾಲಕೃಷ್ಣ ಕುರುಪ್ (90) ಕಾಸರಗೊಡಿನ ನೀಲೇಶ್ವದ ಪಟ್ಟೇನದಲ್ಲಿ ಮಾ.18 ರಂದು ರಾತ್ರಿ ನಿಧನರಾಗಿದ್ದಾರೆ.

ಕೇರಳ ಮೂಲದವರಾದ ಇವರು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿ ನೆಲೆಸಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಪುತ್ರ ಇದ್ದಾರೆ.

ಚೆಂಡೆ ಮತ್ತು ಮದ್ದಲೆಯ ತಾಳ-ಲಯವನ್ನು ಮೈಗೂಡಿಸಿಕೊಂಡಿದ್ದ ಕುರುಪ್ ಅವರು ತೆಂಕು ತಿಟ್ಟಿನಲ್ಲಿ ಲಭ್ಯವಿರುವ ಅಧಿಕೃತ ಪಠ್ಯವನ್ನು ಬಳಸಿ ಪುಸ್ತಕಗಳನ್ನು ಬರೆದಿದ್ದಾರೆ. 60 ವರ್ಷಗಳಿಗೂ ಹೆಚ್ಚು ಕಾಲ ಯಕ್ಷಗಾನ ಪಾಠ ಹೇಳಿ ದೊಡ್ಡ ಶಿಷ್ಯ ಪರಂಪರೆಯನ್ನು ಬೆಳೆಸಿದ್ದರು. ಪರಂಪರೆಯ ತೆಂಕುತಿಟ್ಟಿನ ಭಾಗವತಿಕೆ ಅಥವಾ ಹಳೆಯ ಕ್ರಮದ ಪದ್ಯಗಳ ಗಾಯನದಲ್ಲಿ ಹೆಸರು ಗಳಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya
error: Content is protected !!