22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

ಬೆಳ್ತಂಗಡಿ: ಯಕ್ಷಗಾನ ಮತ್ತು ಚೆಂಡೆ-ಮದ್ದಲೆ ಕಲಾವಿದ, ಯಕ್ಷಗುರು ಬಿ. ಗೋಪಾಲಕೃಷ್ಣ ಕುರುಪ್ (90) ಕಾಸರಗೊಡಿನ ನೀಲೇಶ್ವದ ಪಟ್ಟೇನದಲ್ಲಿ ಮಾ.18 ರಂದು ರಾತ್ರಿ ನಿಧನರಾಗಿದ್ದಾರೆ.

ಕೇರಳ ಮೂಲದವರಾದ ಇವರು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿ ನೆಲೆಸಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಪುತ್ರ ಇದ್ದಾರೆ.

ಚೆಂಡೆ ಮತ್ತು ಮದ್ದಲೆಯ ತಾಳ-ಲಯವನ್ನು ಮೈಗೂಡಿಸಿಕೊಂಡಿದ್ದ ಕುರುಪ್ ಅವರು ತೆಂಕು ತಿಟ್ಟಿನಲ್ಲಿ ಲಭ್ಯವಿರುವ ಅಧಿಕೃತ ಪಠ್ಯವನ್ನು ಬಳಸಿ ಪುಸ್ತಕಗಳನ್ನು ಬರೆದಿದ್ದಾರೆ. 60 ವರ್ಷಗಳಿಗೂ ಹೆಚ್ಚು ಕಾಲ ಯಕ್ಷಗಾನ ಪಾಠ ಹೇಳಿ ದೊಡ್ಡ ಶಿಷ್ಯ ಪರಂಪರೆಯನ್ನು ಬೆಳೆಸಿದ್ದರು. ಪರಂಪರೆಯ ತೆಂಕುತಿಟ್ಟಿನ ಭಾಗವತಿಕೆ ಅಥವಾ ಹಳೆಯ ಕ್ರಮದ ಪದ್ಯಗಳ ಗಾಯನದಲ್ಲಿ ಹೆಸರು ಗಳಿಸಿದ್ದರು.

Related posts

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!