25.2 C
ಪುತ್ತೂರು, ಬೆಳ್ತಂಗಡಿ
May 8, 2025
Uncategorizedಧಾರ್ಮಿಕ

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಧರ್ಮಸಿಂಹಾಸನ ಬಯಲಾಟ

ನ್ಯಾಯತರ್ಪು : ಮಾ.18.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ಧರ್ಮ ಸಿಂಹಾಸನ ಎಂಬ ಬಯಲಾಟ ಮಾ.18 ರಂದು ನಡೆಯಿತು.

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಯಕ್ಷಧ್ರುವ ಪಟ್ಲ ಸತೀಶ್‌ ಶೆಟ್ಟಿಯವರ ಸಾರಥ್ಯದಲ್ಲಿ ಧರ್ಮ ಸಿಂಹಾಸನ ಎಂಬ ಪುಣ್ಯ ಕಥಾಭಾಗವನ್ನು ಬಯಲಾಟ ನಡೆಯಿತು.ನಾಳ,ಗೇರುಕಟ್ಟೆ ಯಕ್ಷಗಾನ ಕಲಾಭಿಮಾನಿಗಳು,ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿ,ಅಭಿವೃದ್ಧಿ ಸಮಿತಿ,ಭಜನಾ ಮಂಡಳಿ ಪದಾಧಿಕಾರಿಗಳು ಭಾಗವಹಿಸಿದರು.
ಈ ಸಂದರ್ಭದಲ್ಲಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕ್ಷೇತ್ರದ ಅಶ್ವಥಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ವರ ಪೂಜೆ, ಧಾರ್ಮಿಕ ಸಭೆ ಹಾಗೂ ಯಕ್ಷಗಾನ ಬಯಲಾಟ ಎ.5 ರಂದು ನಡೆಯುವ ಆಮಂತ್ರಣ ಪತ್ರಿಕೆಯನ್ನು ಪಟ್ಲ ಸತೀಶ್ ಶೆಟ್ಟಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ,ದೇವಸ್ಥಾನದ ಪ್ರಧಾನ ಆರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರು, ಸದಸ್ಯರಾದ ಶರತ್ ಕುಮಾರ್ ಶೆಟ್ಟಿ ಕೆ.ನೀನಾ ಕುಮಾರ್,ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಯಂ,ಕಾರ್ಯದರ್ಶಿ ರಾಜೇಶ್ ಪೆರ್ಬುಂಡ, ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಹಾಗೂ ಭಕ್ತರ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya
error: Content is protected !!