September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

ಬೆಳ್ತಂಗಡಿ: ಯಕ್ಷಗಾನ ಮತ್ತು ಚೆಂಡೆ-ಮದ್ದಲೆ ಕಲಾವಿದ, ಯಕ್ಷಗುರು ಬಿ. ಗೋಪಾಲಕೃಷ್ಣ ಕುರುಪ್ (90) ಕಾಸರಗೊಡಿನ ನೀಲೇಶ್ವದ ಪಟ್ಟೇನದಲ್ಲಿ ಮಾ.18 ರಂದು ರಾತ್ರಿ ನಿಧನರಾಗಿದ್ದಾರೆ.

ಕೇರಳ ಮೂಲದವರಾದ ಇವರು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿ ನೆಲೆಸಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಪುತ್ರ ಇದ್ದಾರೆ.

ಚೆಂಡೆ ಮತ್ತು ಮದ್ದಲೆಯ ತಾಳ-ಲಯವನ್ನು ಮೈಗೂಡಿಸಿಕೊಂಡಿದ್ದ ಕುರುಪ್ ಅವರು ತೆಂಕು ತಿಟ್ಟಿನಲ್ಲಿ ಲಭ್ಯವಿರುವ ಅಧಿಕೃತ ಪಠ್ಯವನ್ನು ಬಳಸಿ ಪುಸ್ತಕಗಳನ್ನು ಬರೆದಿದ್ದಾರೆ. 60 ವರ್ಷಗಳಿಗೂ ಹೆಚ್ಚು ಕಾಲ ಯಕ್ಷಗಾನ ಪಾಠ ಹೇಳಿ ದೊಡ್ಡ ಶಿಷ್ಯ ಪರಂಪರೆಯನ್ನು ಬೆಳೆಸಿದ್ದರು. ಪರಂಪರೆಯ ತೆಂಕುತಿಟ್ಟಿನ ಭಾಗವತಿಕೆ ಅಥವಾ ಹಳೆಯ ಕ್ರಮದ ಪದ್ಯಗಳ ಗಾಯನದಲ್ಲಿ ಹೆಸರು ಗಳಿಸಿದ್ದರು.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!