March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ ತಾಲೂಕಿನಲ್ಲಿ ಜೆಸಿಐ ಬೆಳ್ತಂಗಡಿ ವತಿಯಿಂದ ಅಗತ್ಯ ಇರುವಲ್ಲಿಗೆ ಶಾಶ್ವತ ಯೋಜನೆ ಮಾಡುವ ಉದ್ದೇಶದಿಂದ
ಫೆಬ್ರವರಿ 17 ರಂದು ಜೇಸಿ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು ಜೇಸಿ ರಾಷ್ಟ್ರೀಯ ತರಬೇತುದಾರ ಮಂಗಳೂರಿನ ಜೇಸಿ ದೀಪಕ್ ರಾಜ್ ಇವರು ತರಬೇತಿಯನ್ನು ನಡೆಸಿಕೊಟ್ಟರು.

ತಾಲೂಕಿನಲ್ಲಿ ಯಾವ ಸಮಸ್ಯೆ ಇದೆ ಅದಕ್ಕೆ ಜೆಸಿಐ ಬೆಳ್ತಂಗಡಿ ಇಂದ ಯಾವ ಪರಿಹಾರ ಮಾಡಬಹುದು ಮತ್ತು ಯಾವ ಶಾಶ್ವತ ಯೋಜನೆಯಿಂದ ಸಾರ್ವಜನಿಕರಿಗೆ ಉಪಯೋಗ ಆಗಬಹುದು, ಪರಿಣಾಮಕಾರಿಯಾಗಬಲ್ಲುದು ಎಂಬುದರ ಬಗ್ಗೆ ಸವಿಸ್ತಾರವಾಗಿ ತರಬೇತಿಯನ್ನು ನಡೆಸಿಕೊಟ್ಟರು. ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಜೇಸಿ ಅರುಣಾ ಜಯರಾಜ್ ಕಾರ್ಯಕ್ರಮವನ್ನು ಸಂಯೊಜಿಸಿದರು. ಜೇಸಿ ರಜತ್ ಮೋರ್ತಾಜೆ ತರಬೇತುದಾರರನ್ನು ಪರಿಚಯಿಸಿದರು. ಕಾರ್ಯದರ್ಶಿ ಶೈಲೇಶ್ ಕೆ ಇವರು ವಂದಿಸಿದರು.


ತರಬೇತಿ ಕಾರ್ಯಕ್ರಮದಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ , ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್, ನಿಕಟ ಪೂರ್ವಾಧ್ಯಕ್ಷರಾದ ರಂಜಿತ್ ಎಚ್‌ಡಿ ಮತ್ತು ಪೂರ್ವಾಧ್ಯಕ್ಷರು, ಜೇಸಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

Suddi Udaya

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya
error: Content is protected !!