September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ ತಾಲೂಕಿನಲ್ಲಿ ಜೆಸಿಐ ಬೆಳ್ತಂಗಡಿ ವತಿಯಿಂದ ಅಗತ್ಯ ಇರುವಲ್ಲಿಗೆ ಶಾಶ್ವತ ಯೋಜನೆ ಮಾಡುವ ಉದ್ದೇಶದಿಂದ
ಫೆಬ್ರವರಿ 17 ರಂದು ಜೇಸಿ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು ಜೇಸಿ ರಾಷ್ಟ್ರೀಯ ತರಬೇತುದಾರ ಮಂಗಳೂರಿನ ಜೇಸಿ ದೀಪಕ್ ರಾಜ್ ಇವರು ತರಬೇತಿಯನ್ನು ನಡೆಸಿಕೊಟ್ಟರು.

ತಾಲೂಕಿನಲ್ಲಿ ಯಾವ ಸಮಸ್ಯೆ ಇದೆ ಅದಕ್ಕೆ ಜೆಸಿಐ ಬೆಳ್ತಂಗಡಿ ಇಂದ ಯಾವ ಪರಿಹಾರ ಮಾಡಬಹುದು ಮತ್ತು ಯಾವ ಶಾಶ್ವತ ಯೋಜನೆಯಿಂದ ಸಾರ್ವಜನಿಕರಿಗೆ ಉಪಯೋಗ ಆಗಬಹುದು, ಪರಿಣಾಮಕಾರಿಯಾಗಬಲ್ಲುದು ಎಂಬುದರ ಬಗ್ಗೆ ಸವಿಸ್ತಾರವಾಗಿ ತರಬೇತಿಯನ್ನು ನಡೆಸಿಕೊಟ್ಟರು. ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಜೇಸಿ ಅರುಣಾ ಜಯರಾಜ್ ಕಾರ್ಯಕ್ರಮವನ್ನು ಸಂಯೊಜಿಸಿದರು. ಜೇಸಿ ರಜತ್ ಮೋರ್ತಾಜೆ ತರಬೇತುದಾರರನ್ನು ಪರಿಚಯಿಸಿದರು. ಕಾರ್ಯದರ್ಶಿ ಶೈಲೇಶ್ ಕೆ ಇವರು ವಂದಿಸಿದರು.


ತರಬೇತಿ ಕಾರ್ಯಕ್ರಮದಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ , ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್, ನಿಕಟ ಪೂರ್ವಾಧ್ಯಕ್ಷರಾದ ರಂಜಿತ್ ಎಚ್‌ಡಿ ಮತ್ತು ಪೂರ್ವಾಧ್ಯಕ್ಷರು, ಜೇಸಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಮೇ 21: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಮಾರೋಪ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya
error: Content is protected !!