July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ ತಾಲೂಕಿನಲ್ಲಿ ಜೆಸಿಐ ಬೆಳ್ತಂಗಡಿ ವತಿಯಿಂದ ಅಗತ್ಯ ಇರುವಲ್ಲಿಗೆ ಶಾಶ್ವತ ಯೋಜನೆ ಮಾಡುವ ಉದ್ದೇಶದಿಂದ
ಫೆಬ್ರವರಿ 17 ರಂದು ಜೇಸಿ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು ಜೇಸಿ ರಾಷ್ಟ್ರೀಯ ತರಬೇತುದಾರ ಮಂಗಳೂರಿನ ಜೇಸಿ ದೀಪಕ್ ರಾಜ್ ಇವರು ತರಬೇತಿಯನ್ನು ನಡೆಸಿಕೊಟ್ಟರು.

ತಾಲೂಕಿನಲ್ಲಿ ಯಾವ ಸಮಸ್ಯೆ ಇದೆ ಅದಕ್ಕೆ ಜೆಸಿಐ ಬೆಳ್ತಂಗಡಿ ಇಂದ ಯಾವ ಪರಿಹಾರ ಮಾಡಬಹುದು ಮತ್ತು ಯಾವ ಶಾಶ್ವತ ಯೋಜನೆಯಿಂದ ಸಾರ್ವಜನಿಕರಿಗೆ ಉಪಯೋಗ ಆಗಬಹುದು, ಪರಿಣಾಮಕಾರಿಯಾಗಬಲ್ಲುದು ಎಂಬುದರ ಬಗ್ಗೆ ಸವಿಸ್ತಾರವಾಗಿ ತರಬೇತಿಯನ್ನು ನಡೆಸಿಕೊಟ್ಟರು. ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಜೇಸಿ ಅರುಣಾ ಜಯರಾಜ್ ಕಾರ್ಯಕ್ರಮವನ್ನು ಸಂಯೊಜಿಸಿದರು. ಜೇಸಿ ರಜತ್ ಮೋರ್ತಾಜೆ ತರಬೇತುದಾರರನ್ನು ಪರಿಚಯಿಸಿದರು. ಕಾರ್ಯದರ್ಶಿ ಶೈಲೇಶ್ ಕೆ ಇವರು ವಂದಿಸಿದರು.


ತರಬೇತಿ ಕಾರ್ಯಕ್ರಮದಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ , ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್, ನಿಕಟ ಪೂರ್ವಾಧ್ಯಕ್ಷರಾದ ರಂಜಿತ್ ಎಚ್‌ಡಿ ಮತ್ತು ಪೂರ್ವಾಧ್ಯಕ್ಷರು, ಜೇಸಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya
error: Content is protected !!