23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಜೇಸಿ ಭವನದಲ್ಲಿ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಸಲಾಯಿತು.
ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ತರಬೇತುದಾರರಾಗಿ ವಲಯ ಉಪಾಧ್ಯಕ್ಷ ಜೆಎಫ್ಎಮ್ ರಂಜಿತ್ ಎಚ್‌ಡಿ ಇವರು ಜೆಸಿಐ ರಾಷ್ಟ್ರೀಯ ಮತ್ತು ವಲಯದ ಮಾರ್ಗದರ್ಶನ ಹಾಗೂ ಪದಾಧಿಕಾರಿಗಳ ಕರ್ತವ್ಯ ಮತ್ತು ಘಟಕದ ನಿರ್ವಹಣೆ ಕುರಿತು ತರಬೇತಿಯನ್ನು ನೀಡಿದರು.

ವೇದಿಕೆಯಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ ಮತ್ತು ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್ ಉಪಸ್ಥಿತರಿದ್ದರು.

ಜೇಸಿ ರಜತ್ ಮೋರ್ತಾಜೆ ಇವರು ವೇದಿಕೆ ಆಹ್ವಾನಿಸಿ, ಕಾರ್ಯಕ್ರಮ ಸಂಯೋಜಕ ಜೇಸಿ ರಕ್ಷಿತ್ ಅಂಡಿಂಜೆ ತರಬೇತುದಾರರನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಜೇಸಿ ರಾಮಕೃಷ್ಣ ಶರ್ಮ ಧನ್ಯವಾದ ಸಲ್ಲಿಸಿದರು.

ಸಭಾಧ್ಯಕ್ಷರು ಸಭೆಯನ್ನು 3 ನೇ ಪದಾಧಿಕಾರಿಗಳ ಸಭೆಗೆ ಮುಂದೂಡಿದರು. ತರಬೇತಿ ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya
error: Content is protected !!