25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

ಬೆಳ್ತಂಗಡಿ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನವರು ಎರಡು ವಾಲಿಬಾಲ್ ಹಾಗೂ 2 ತ್ರೋಬಾಲ್ ಪೋಲ್ ಗಳನ್ನು ಕೊಡುಗೆಯಾಗಿ ನೀಡಿದರು.

ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಮ್ಯಾನೇಜರ್ ಶರುಣ್ ಪಿಂಟೋ ಹಾಗೂ ಸಿಬ್ಬಂದಿ ರಾಜೇಶ್ ಇವರು ನೇಲ್ಯಡ್ಕಕ್ಕೆ ಆಗಮಿಸಿ ಈ ಕೊಡುಗೆಯನ್ನು ಸಂಸ್ಥೆಗೆ ಹಸ್ತಾಂತರಿಸಿದರು. ಗ್ರಾಮೀಣ ಪ್ರದೇಶದಲ್ಲಿರುವ ಕನ್ನಡ ಮಾಧ್ಯಮ ಸರಕಾರಿ ಪ್ರೌಢಶಾಲೆಗೆ ಶಾಶ್ವತ ಕೊಡುಗೆಯನ್ನು ನೀಡಿದ ಎಂಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಹಾಗೂ ಆಡಳಿತ ಮಂಡಳಿಯ ಎಲ್ಲಾ ಸದಸ್ಯರಿಗೆ ಮುಖ್ಯೋಪಾಧ್ಯಾಯ ರಾಜೇಂದ್ರ ಕೃಷ್ಣ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.


ಎಸ್ ಡಿ ಎಂ ಸಿ ಯ ಯಶವಂತ ಗೌಡ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ವಿಜಯಕುಮಾರ್ ನಿರೂಪಿಸಿ, ಅರವಿಂದ ಗೋಖಲೆ ಸ್ವಾಗತಿಸಿ ಉದಯಕುಮಾರ್ ವಂದಿಸಿದರು.

ಈ ಸಮಾರಂಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!