22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

ಬೆಳ್ತಂಗಡಿ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿದ ಘಟನೆ ಅತ್ಯಂತ ಅಮಾನವೀಯವಾದುದು. ಇದು ನಾಗರಿಕ ಸಮಾಜದ ಅನಾಗರಿಕ ವರ್ತನೆಯ ಪರಮಾವಧಿಯಾಗಿದೆ. ವಿದ್ಯಾವಂತ ಜಿಲ್ಲೆಯಲ್ಲಿ , ಅಜ್ಞಾನಿಗಳು ಇನ್ನೂ ಜೀವಂತವಿರುವುದಕ್ಕೆ ಉತ್ತಮ ಉದಾಹರಣೆ. ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡುವ ಬದಲಾಗಿ ಘಟನೆಯನ್ನು ತಡೆಯಲು ಪ್ರಯತ್ನಿಸದಿರುವುದು ಮಾನವೀಯತೆ ಸತ್ತಿರುವುದಕ್ಕೆ ಸಾಕ್ಷಿ. ಘಟನೆಯಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮಲ್ಪೆ ಪೋಲಿಸರ ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸಬೇಕು . ಘಟನೆ ನಡೆದು ಒಂದು ದಿನ ತಡವಾಗಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ.

ಈ ಹಿಂದೆ ಬೆತ್ತಲೆ ಪ್ರಕರಣದಲ್ಲಿ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಘಟನೆಯ ನಂತರ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸುವ ಮೂಲಕ ಮತ್ತೊಮ್ಮೆ ಕರಾವಳಿಗರು ಜಗತ್ತಿನ ಮುಂದೆ ತಲೆ ತಗ್ಗಿಸುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಬೇಕು. ಶೇಖರ್ ಲಾಯಿಲಸಂಚಾಲಕಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಎಲ್.ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya
error: Content is protected !!