23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದಲ್ಲಿ ಚಿರತೆ ಓಡಾಟ ಕಂಡು ಬಂದಿದೆ.‌ ಮಾ.18 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಚಂದ್ಕೂರು ರಸ್ತೆಯ ನಿರ್ಪರಿ ಎಂಬಲ್ಲಿ ಸ್ಥಳೀಯರಾದ ಸಿಪ್ರಿಯನ್ ಎಂಬವರು ಮನೆ ಬಳಿಯ ರಸ್ತೆಯಲ್ಲಿ ಬರುತಿದ್ದಾಗ ದೊಡ್ಡ ಗಾತ್ರದ ಚಿರತೆ ರಸ್ತೆಯಲ್ಲಿ ಹೋಗುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಪಕ್ಕದ ಮನೆಯ ಸುನೀಲ್ ಎಂಬವರಿಗೆ ವಿಷಯ ತಿಳಿಸಿದಾಗ ಅವರು ಸ್ಥಳೀಯ ಪಂಚಾಯತ್ ಸದಸ್ಯ ಪ್ರಸಾದ್ ಅವರಿಗೆ ಈ ಬಗ್ಗೆ ಪೋನ್ ಮೂಲಕ ತಿಳಿಸಿದ್ದು, ಅವರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತು‌ ಪತ್ತೆಯಾಗಿದೆ.‌

ಈ ಬಗ್ಗೆ ಹಂದೆವೂರು, ಅಮ್ಮನಂಗಡಿ, ನಿರ್ಪರಿ ಭಾಗದ ಕೆಲವು ಮನೆಗಳಿಗೆ ತೆರಳಿ ರಾತ್ರಿ ಹೊತ್ತು ಒಬ್ಬಂಟಿಯಾಗಿ ಸಂಚರಿಸದಂತೆ ಹಾಗೂ ಸಾಕು ಪ್ರಾಣಿಗಳ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಅದಲ್ಲದೇ ಮತ್ತೊಮ್ಮೆ ಚಿರತೆ ಕಂಡು ಬಂದರೆ ಗೂಡು ಇಡುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದಿದ್ದಾರೆ.‌ ಕಳೆದ ವರ್ಷ ಕೂಡ ಇದೇ ಸಮಯಗಳಲ್ಲಿ ಚಿರತೆ ಈ ಭಾಗದಲ್ಲಿ ಕಂಡು ಬಂದಿದ್ದು, ಕೆಲವು ಮನೆಗಳ ಸಾಕು ನಾಯಿಗಳನ್ನು ಹಿಡಿದಿದ್ದು ಮತ್ತೆ ಈ ಬಾರಿ ಚಿರತೆ ಸಂಚಾರ ಸ್ಥಳೀಯರನ್ನು ಚಿಂತೆಗೀಡು ಮಾಡಿದೆ.

Related posts

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!