July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದಲ್ಲಿ ಚಿರತೆ ಓಡಾಟ ಕಂಡು ಬಂದಿದೆ.‌ ಮಾ.18 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಚಂದ್ಕೂರು ರಸ್ತೆಯ ನಿರ್ಪರಿ ಎಂಬಲ್ಲಿ ಸ್ಥಳೀಯರಾದ ಸಿಪ್ರಿಯನ್ ಎಂಬವರು ಮನೆ ಬಳಿಯ ರಸ್ತೆಯಲ್ಲಿ ಬರುತಿದ್ದಾಗ ದೊಡ್ಡ ಗಾತ್ರದ ಚಿರತೆ ರಸ್ತೆಯಲ್ಲಿ ಹೋಗುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಪಕ್ಕದ ಮನೆಯ ಸುನೀಲ್ ಎಂಬವರಿಗೆ ವಿಷಯ ತಿಳಿಸಿದಾಗ ಅವರು ಸ್ಥಳೀಯ ಪಂಚಾಯತ್ ಸದಸ್ಯ ಪ್ರಸಾದ್ ಅವರಿಗೆ ಈ ಬಗ್ಗೆ ಪೋನ್ ಮೂಲಕ ತಿಳಿಸಿದ್ದು, ಅವರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತು‌ ಪತ್ತೆಯಾಗಿದೆ.‌

ಈ ಬಗ್ಗೆ ಹಂದೆವೂರು, ಅಮ್ಮನಂಗಡಿ, ನಿರ್ಪರಿ ಭಾಗದ ಕೆಲವು ಮನೆಗಳಿಗೆ ತೆರಳಿ ರಾತ್ರಿ ಹೊತ್ತು ಒಬ್ಬಂಟಿಯಾಗಿ ಸಂಚರಿಸದಂತೆ ಹಾಗೂ ಸಾಕು ಪ್ರಾಣಿಗಳ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಅದಲ್ಲದೇ ಮತ್ತೊಮ್ಮೆ ಚಿರತೆ ಕಂಡು ಬಂದರೆ ಗೂಡು ಇಡುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದಿದ್ದಾರೆ.‌ ಕಳೆದ ವರ್ಷ ಕೂಡ ಇದೇ ಸಮಯಗಳಲ್ಲಿ ಚಿರತೆ ಈ ಭಾಗದಲ್ಲಿ ಕಂಡು ಬಂದಿದ್ದು, ಕೆಲವು ಮನೆಗಳ ಸಾಕು ನಾಯಿಗಳನ್ನು ಹಿಡಿದಿದ್ದು ಮತ್ತೆ ಈ ಬಾರಿ ಚಿರತೆ ಸಂಚಾರ ಸ್ಥಳೀಯರನ್ನು ಚಿಂತೆಗೀಡು ಮಾಡಿದೆ.

Related posts

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡರ 517ನೇ ಜನ್ಮ ದಿನಾಚರಣೆ

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!