25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದಲ್ಲಿ ಚಿರತೆ ಓಡಾಟ ಕಂಡು ಬಂದಿದೆ.‌ ಮಾ.18 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಚಂದ್ಕೂರು ರಸ್ತೆಯ ನಿರ್ಪರಿ ಎಂಬಲ್ಲಿ ಸ್ಥಳೀಯರಾದ ಸಿಪ್ರಿಯನ್ ಎಂಬವರು ಮನೆ ಬಳಿಯ ರಸ್ತೆಯಲ್ಲಿ ಬರುತಿದ್ದಾಗ ದೊಡ್ಡ ಗಾತ್ರದ ಚಿರತೆ ರಸ್ತೆಯಲ್ಲಿ ಹೋಗುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಪಕ್ಕದ ಮನೆಯ ಸುನೀಲ್ ಎಂಬವರಿಗೆ ವಿಷಯ ತಿಳಿಸಿದಾಗ ಅವರು ಸ್ಥಳೀಯ ಪಂಚಾಯತ್ ಸದಸ್ಯ ಪ್ರಸಾದ್ ಅವರಿಗೆ ಈ ಬಗ್ಗೆ ಪೋನ್ ಮೂಲಕ ತಿಳಿಸಿದ್ದು, ಅವರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತು‌ ಪತ್ತೆಯಾಗಿದೆ.‌

ಈ ಬಗ್ಗೆ ಹಂದೆವೂರು, ಅಮ್ಮನಂಗಡಿ, ನಿರ್ಪರಿ ಭಾಗದ ಕೆಲವು ಮನೆಗಳಿಗೆ ತೆರಳಿ ರಾತ್ರಿ ಹೊತ್ತು ಒಬ್ಬಂಟಿಯಾಗಿ ಸಂಚರಿಸದಂತೆ ಹಾಗೂ ಸಾಕು ಪ್ರಾಣಿಗಳ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಅದಲ್ಲದೇ ಮತ್ತೊಮ್ಮೆ ಚಿರತೆ ಕಂಡು ಬಂದರೆ ಗೂಡು ಇಡುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದಿದ್ದಾರೆ.‌ ಕಳೆದ ವರ್ಷ ಕೂಡ ಇದೇ ಸಮಯಗಳಲ್ಲಿ ಚಿರತೆ ಈ ಭಾಗದಲ್ಲಿ ಕಂಡು ಬಂದಿದ್ದು, ಕೆಲವು ಮನೆಗಳ ಸಾಕು ನಾಯಿಗಳನ್ನು ಹಿಡಿದಿದ್ದು ಮತ್ತೆ ಈ ಬಾರಿ ಚಿರತೆ ಸಂಚಾರ ಸ್ಥಳೀಯರನ್ನು ಚಿಂತೆಗೀಡು ಮಾಡಿದೆ.

Related posts

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!