25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಭಾರತೀಯ ಸಂಜಾತೆ ಸುನೀತ ವಿಲಿಯಮ್ಸ್ ಹಾಗೂ ಅಮೆರಿಕದ ಬುಚ್ ವಿಲ್ಮೋರ್ ರವರು ಬಾಹ್ಯಾಕಾಶ ದಿಂದ ನಿನ್ನೆ ಬೆಳಿಗ್ಗೆ 3.27 ಕ್ಕೆ ಭೂಮಿಗೆ ಬಂದಿಳಿದ ಐತಿಹಾಸಿಕ ಸಾಹಸದ ಕ್ಷಣದ ದೃಶ್ಯಗಳನ್ನು ಎಲ್ಲಾ ಮಕ್ಕಳಿಗೂ ತೋರಿಸಿ , ಸಾಧನೆ ತೋರಿದ ಈ ಸಾಧಕರಿಗೆ ಸಮಸ್ತ ವಿದ್ವತ್ ವಿದ್ಯಾರ್ಥಿ ಹಾಗೂ ಬೋಧಕ ಸಿಬ್ಬಂದಿ ಗೌರವ ಸೆಲ್ಯೂಟ್ ಸಮರ್ಪಣೆ ಮಾಡಿ, ಮಾ.20 ರಮದು ನಡೆದ ಕಾರ್ಯಕ್ರಮದಲ್ಲಿ ಅವರ ಸಾಧನೆಯನ್ನು ಕೊಂಡಾಡಿದರು.

ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಕ್ಕಳು ಅಭ್ಯಾಸ ಮಾಡುವ ಭೌತಶಾಸ್ತ್ರ ದ ಥಿಯರಿ ಹೇಗೆ ಉಪಯೋಗಿಸಲ್ಪಡುತ್ತದೆ , ಭೌತಶಾಸ್ತ್ರ ವಿಷಯ ತಜ್ಞ, ಅತುಕುರಿ ನರೇಶ್ ವಿವರಿಸಿದರೆ, ರಸಾಯನ ಶಾಸ್ತ್ರ ದಲ್ಲಿ ಮಕ್ಕಳು ಕಲಿಯುವ ಥಿಯರಿಗಳು ಹೇಗೆ ಉಪಯೋಗಿಸಲ್ಪಡುತ್ತವೆ ಎಂಬುದನ್ನು, ರಸಾಯನಶಾಸ್ತ್ರ ವಿಷಯತಜ್ಞ, ಪ್ರಥಾಪ್ ದೊಡ್ಡಮನೆ ಯವರು ವಿವರಿಸಿದರು. ವೈಜ್ಞಾನಿಕ ಕುತೂಹಲ ಮೂಡಿಸುವ ಪ್ರಮುಖ ಉದ್ದೇಶ ಹೊಂದಿರುವ ಇನ್ಸ್ಪೈರ್ ವಿದ್ವತ್ ವೇದಿಕೆ ಈ ಕಾರ್ಯಕ್ರಮ ಆಯೋಜಿಸಿತ್ತು.

ನಂತರ ಗ್ರೂಪ್ ಕ್ಯಾಪ್ಟನ್ ರಾಹುಲ್ ಸ್ವಾಮಿ ಗೌರವ ವಂದನೆಯ ಕಾರ್ಯಕ್ರಮ ನೆರವೇರಿಸಿದರು.

ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ ಯವರು ಸುನೀತಾ ವಿಲಿಯಮ್ಸ್ ರವರ ಸಾಹಸಗಾಥೆಯ ವಿವರ ನೀಡಿ, ಪ್ರತಿಭಾವಂತರಿಗಿರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು . ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಉಪಸ್ಥಿತರಿದ್ದರು. ಕು. ಅನುಶ್ರೀ, ಜೀವಶಾಸ್ತ್ರ ಉಪನ್ಯಾಸಕಿ, ಕಾರ್ಯಕ್ರಮ ನಿರೂಪಿಸಿದರು.

Related posts

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!