23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಭಾರತೀಯ ಸಂಜಾತೆ ಸುನೀತ ವಿಲಿಯಮ್ಸ್ ಹಾಗೂ ಅಮೆರಿಕದ ಬುಚ್ ವಿಲ್ಮೋರ್ ರವರು ಬಾಹ್ಯಾಕಾಶ ದಿಂದ ನಿನ್ನೆ ಬೆಳಿಗ್ಗೆ 3.27 ಕ್ಕೆ ಭೂಮಿಗೆ ಬಂದಿಳಿದ ಐತಿಹಾಸಿಕ ಸಾಹಸದ ಕ್ಷಣದ ದೃಶ್ಯಗಳನ್ನು ಎಲ್ಲಾ ಮಕ್ಕಳಿಗೂ ತೋರಿಸಿ , ಸಾಧನೆ ತೋರಿದ ಈ ಸಾಧಕರಿಗೆ ಸಮಸ್ತ ವಿದ್ವತ್ ವಿದ್ಯಾರ್ಥಿ ಹಾಗೂ ಬೋಧಕ ಸಿಬ್ಬಂದಿ ಗೌರವ ಸೆಲ್ಯೂಟ್ ಸಮರ್ಪಣೆ ಮಾಡಿ, ಮಾ.20 ರಮದು ನಡೆದ ಕಾರ್ಯಕ್ರಮದಲ್ಲಿ ಅವರ ಸಾಧನೆಯನ್ನು ಕೊಂಡಾಡಿದರು.

ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಕ್ಕಳು ಅಭ್ಯಾಸ ಮಾಡುವ ಭೌತಶಾಸ್ತ್ರ ದ ಥಿಯರಿ ಹೇಗೆ ಉಪಯೋಗಿಸಲ್ಪಡುತ್ತದೆ , ಭೌತಶಾಸ್ತ್ರ ವಿಷಯ ತಜ್ಞ, ಅತುಕುರಿ ನರೇಶ್ ವಿವರಿಸಿದರೆ, ರಸಾಯನ ಶಾಸ್ತ್ರ ದಲ್ಲಿ ಮಕ್ಕಳು ಕಲಿಯುವ ಥಿಯರಿಗಳು ಹೇಗೆ ಉಪಯೋಗಿಸಲ್ಪಡುತ್ತವೆ ಎಂಬುದನ್ನು, ರಸಾಯನಶಾಸ್ತ್ರ ವಿಷಯತಜ್ಞ, ಪ್ರಥಾಪ್ ದೊಡ್ಡಮನೆ ಯವರು ವಿವರಿಸಿದರು. ವೈಜ್ಞಾನಿಕ ಕುತೂಹಲ ಮೂಡಿಸುವ ಪ್ರಮುಖ ಉದ್ದೇಶ ಹೊಂದಿರುವ ಇನ್ಸ್ಪೈರ್ ವಿದ್ವತ್ ವೇದಿಕೆ ಈ ಕಾರ್ಯಕ್ರಮ ಆಯೋಜಿಸಿತ್ತು.

ನಂತರ ಗ್ರೂಪ್ ಕ್ಯಾಪ್ಟನ್ ರಾಹುಲ್ ಸ್ವಾಮಿ ಗೌರವ ವಂದನೆಯ ಕಾರ್ಯಕ್ರಮ ನೆರವೇರಿಸಿದರು.

ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ ಯವರು ಸುನೀತಾ ವಿಲಿಯಮ್ಸ್ ರವರ ಸಾಹಸಗಾಥೆಯ ವಿವರ ನೀಡಿ, ಪ್ರತಿಭಾವಂತರಿಗಿರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು . ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಉಪಸ್ಥಿತರಿದ್ದರು. ಕು. ಅನುಶ್ರೀ, ಜೀವಶಾಸ್ತ್ರ ಉಪನ್ಯಾಸಕಿ, ಕಾರ್ಯಕ್ರಮ ನಿರೂಪಿಸಿದರು.

Related posts

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya
error: Content is protected !!