March 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಮಾ.20ರಂದು ಸುಸಜ್ಜಿತವಾದ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗಾಗಿ ನವೀಕೃತ ಕಟ್ಟಡ ಮತ್ತು ಆಟದ ಮನೆಯ ಉದ್ಘಾಟನಾ ಕಾರ‍್ಯಕ್ರಮ ನಡೆಯಿತು.

ಸಿಸ್ಟರ್ ಸರಿತಾ ಹಾಗೂ ಸಹಶಿಕ್ಷಕಿ ಫಿಲೋಮಿನಾ ಇವರ ಪ್ರಾರ್ಥನಾ ವಿಧಿಯೊಂದಿಗೆ ಆರಂಭವಾದ ಕಾರ‍್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂದನೀಯ ಫಾ! ಅಬೆಲ್ ಲೋಬೊ ಅವರು ರಿಬ್ಬನ್ ಕತ್ತರಿಸುವ ಮೂಲಕ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ನವೀಕೃತ ಕೊಠಡಿಗೆ ಆಶೀರ್ವಚನಗೈದು ಶುಭ ಹಾರೈಸಿದರು.

ಶಾಲಾ ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ ಅವರು ತಮ್ಮ ಸಂದೇಶದಲ್ಲಿ ನವೀಕರಣದ ಮಹತ್ವವನ್ನು ವಿವರಿಸಿ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಾಲೆಯ ಪ್ರಯತ್ನಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.
ಕಾರ‍್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿವಾಸ್, ಆರ್ಥಿಕ ಸಮಿತಿಯ ಸದಸ್ಯ ಪ್ರವೀಣ್ ವಿಜಯ್ ಡಿಸೋಜ ಹಾಗೂ ಕಾಂಟ್ರಾಕ್ಟರ್ ಅನಿಲ್ ಡಿಸೋಜ ರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಶಾಲೆಯ ಸಿಬ್ಬಂದಿ ವರ್ಗದವರು, ಪಾಲಕ ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ‍್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಹ ಶಿಕ್ಷಕ ರವಿಕುಮಾರ್ ಕಾರ‍್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related posts

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya
error: Content is protected !!