23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಮಾ.20ರಂದು ಸುಸಜ್ಜಿತವಾದ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗಾಗಿ ನವೀಕೃತ ಕಟ್ಟಡ ಮತ್ತು ಆಟದ ಮನೆಯ ಉದ್ಘಾಟನಾ ಕಾರ‍್ಯಕ್ರಮ ನಡೆಯಿತು.

ಸಿಸ್ಟರ್ ಸರಿತಾ ಹಾಗೂ ಸಹಶಿಕ್ಷಕಿ ಫಿಲೋಮಿನಾ ಇವರ ಪ್ರಾರ್ಥನಾ ವಿಧಿಯೊಂದಿಗೆ ಆರಂಭವಾದ ಕಾರ‍್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂದನೀಯ ಫಾ! ಅಬೆಲ್ ಲೋಬೊ ಅವರು ರಿಬ್ಬನ್ ಕತ್ತರಿಸುವ ಮೂಲಕ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ನವೀಕೃತ ಕೊಠಡಿಗೆ ಆಶೀರ್ವಚನಗೈದು ಶುಭ ಹಾರೈಸಿದರು.

ಶಾಲಾ ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ ಅವರು ತಮ್ಮ ಸಂದೇಶದಲ್ಲಿ ನವೀಕರಣದ ಮಹತ್ವವನ್ನು ವಿವರಿಸಿ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಾಲೆಯ ಪ್ರಯತ್ನಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.
ಕಾರ‍್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿವಾಸ್, ಆರ್ಥಿಕ ಸಮಿತಿಯ ಸದಸ್ಯ ಪ್ರವೀಣ್ ವಿಜಯ್ ಡಿಸೋಜ ಹಾಗೂ ಕಾಂಟ್ರಾಕ್ಟರ್ ಅನಿಲ್ ಡಿಸೋಜ ರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಶಾಲೆಯ ಸಿಬ್ಬಂದಿ ವರ್ಗದವರು, ಪಾಲಕ ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ‍್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಹ ಶಿಕ್ಷಕ ರವಿಕುಮಾರ್ ಕಾರ‍್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related posts

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya
error: Content is protected !!