33.4 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಬೆಳ್ತಂಗಡಿ: ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ ಒಕ್ಕೂಟ ಅಧ್ಯಕ್ಷೆ ಶೀಲಾವತಿ ಅಧ್ಯಕ್ಷತೆಯಲ್ಲಿ ಮಾ.18 ರಂದು ಉಜಿರೆ ಗ್ರಾ.ಪಂ.ನಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾ.ಪಂ.ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಂಜೀವಿನಿ ಮಹಿಳೆಯರು ಸರಕಾರದ ಸೌಲಭ್ಯಗಳನ್ನು ಬಳಸಿಕೊಂಡು ಸಶಕ್ತರಾಗಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು. ಮಹಿಳಾ ದಿನಾಚರಣೆಯ ಸಲುವಾಗಿ ಒಕ್ಕೂಟದ ಸದಸ್ಯರಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಸಂಜೀವಿನಿ ಒಕ್ಕೂಟದ ಕಾರ್ಯ ಚಟುವಟಿಕೆಗಳಿಗೆ ಗ್ರಾ.ಪಂ.ನ ಬೆಂಬಲವನ್ನು ವ್ಯಕ್ತಪಡಿಸಿದರು.

ನೂತನ ಪದಾಧಿಕಾರಿಗಳ ಆಯ್ಕೆ ನಡೆದು, ಒಕ್ಕೂಟದ ನೂತನ ಅಧ್ಯಕ್ಷರಾಗಿ ವಿನುತ ರಜತ್ ಗೌಡ, ಉಪಾಧ್ಯಕ್ಷರಾಗಿ ಲೀಲಾ ಶೆಟ್ಟಿ, ಕಾರ್ಯ ದರ್ಶಿಯಾಗಿ ದೀಪಾ, ಜತೆ ಕಾರ್ಯದರ್ಶಿಯಾಗಿ ಅಶ್ವಿನಿ ಮತ್ತು ಕೋಶಧಿಕಾರಿಯಾಗಿ ಶಾಂಭವಿ ಆಯ್ಕೆಯಾದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್, ಕಾರ್ಯದರ್ಶಿ ಶ್ರವಣ್ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ ಹಾಗೂ ಅಧ್ಯಕ್ಷೆ ಶೀಲಾರನ್ನು ಸನ್ಮಾನಿಸಲಾಯಿತು.

ಎಂಬಿಕೆ ಸುಜಾತ ವರದಿ ವಾಚಿಸಿದರು. ಸುಮಿತ್ರಾ ಪ್ರಾರ್ಥಿಸಿ, ಕೃಷಿ ಸಖಿ ಭಾಗೀರಥಿ ಸ್ವಾಗತಿಸಿ, ಎಲ್‌ಸಿಆರ್‌ಪಿ ಚಿತ್ರಾ ವಂದಿಸಿ, ಕಾರ್ಯದರ್ಶಿ ರೇವತಿ ನಿರೂಪಿಸಿದರು.

Related posts

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya
error: Content is protected !!