27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ ತಾಲೂಕಿನಲ್ಲಿ ಜೆಸಿಐ ಬೆಳ್ತಂಗಡಿ ವತಿಯಿಂದ ಅಗತ್ಯ ಇರುವಲ್ಲಿಗೆ ಶಾಶ್ವತ ಯೋಜನೆ ಮಾಡುವ ಉದ್ದೇಶದಿಂದ
ಫೆಬ್ರವರಿ 17 ರಂದು ಜೇಸಿ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು ಜೇಸಿ ರಾಷ್ಟ್ರೀಯ ತರಬೇತುದಾರ ಮಂಗಳೂರಿನ ಜೇಸಿ ದೀಪಕ್ ರಾಜ್ ಇವರು ತರಬೇತಿಯನ್ನು ನಡೆಸಿಕೊಟ್ಟರು.

ತಾಲೂಕಿನಲ್ಲಿ ಯಾವ ಸಮಸ್ಯೆ ಇದೆ ಅದಕ್ಕೆ ಜೆಸಿಐ ಬೆಳ್ತಂಗಡಿ ಇಂದ ಯಾವ ಪರಿಹಾರ ಮಾಡಬಹುದು ಮತ್ತು ಯಾವ ಶಾಶ್ವತ ಯೋಜನೆಯಿಂದ ಸಾರ್ವಜನಿಕರಿಗೆ ಉಪಯೋಗ ಆಗಬಹುದು, ಪರಿಣಾಮಕಾರಿಯಾಗಬಲ್ಲುದು ಎಂಬುದರ ಬಗ್ಗೆ ಸವಿಸ್ತಾರವಾಗಿ ತರಬೇತಿಯನ್ನು ನಡೆಸಿಕೊಟ್ಟರು. ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಜೇಸಿ ಅರುಣಾ ಜಯರಾಜ್ ಕಾರ್ಯಕ್ರಮವನ್ನು ಸಂಯೊಜಿಸಿದರು. ಜೇಸಿ ರಜತ್ ಮೋರ್ತಾಜೆ ತರಬೇತುದಾರರನ್ನು ಪರಿಚಯಿಸಿದರು. ಕಾರ್ಯದರ್ಶಿ ಶೈಲೇಶ್ ಕೆ ಇವರು ವಂದಿಸಿದರು.


ತರಬೇತಿ ಕಾರ್ಯಕ್ರಮದಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ , ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್, ನಿಕಟ ಪೂರ್ವಾಧ್ಯಕ್ಷರಾದ ರಂಜಿತ್ ಎಚ್‌ಡಿ ಮತ್ತು ಪೂರ್ವಾಧ್ಯಕ್ಷರು, ಜೇಸಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya
error: Content is protected !!