25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ ತಾಲೂಕಿನಲ್ಲಿ ಜೆಸಿಐ ಬೆಳ್ತಂಗಡಿ ವತಿಯಿಂದ ಅಗತ್ಯ ಇರುವಲ್ಲಿಗೆ ಶಾಶ್ವತ ಯೋಜನೆ ಮಾಡುವ ಉದ್ದೇಶದಿಂದ
ಫೆಬ್ರವರಿ 17 ರಂದು ಜೇಸಿ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು ಜೇಸಿ ರಾಷ್ಟ್ರೀಯ ತರಬೇತುದಾರ ಮಂಗಳೂರಿನ ಜೇಸಿ ದೀಪಕ್ ರಾಜ್ ಇವರು ತರಬೇತಿಯನ್ನು ನಡೆಸಿಕೊಟ್ಟರು.

ತಾಲೂಕಿನಲ್ಲಿ ಯಾವ ಸಮಸ್ಯೆ ಇದೆ ಅದಕ್ಕೆ ಜೆಸಿಐ ಬೆಳ್ತಂಗಡಿ ಇಂದ ಯಾವ ಪರಿಹಾರ ಮಾಡಬಹುದು ಮತ್ತು ಯಾವ ಶಾಶ್ವತ ಯೋಜನೆಯಿಂದ ಸಾರ್ವಜನಿಕರಿಗೆ ಉಪಯೋಗ ಆಗಬಹುದು, ಪರಿಣಾಮಕಾರಿಯಾಗಬಲ್ಲುದು ಎಂಬುದರ ಬಗ್ಗೆ ಸವಿಸ್ತಾರವಾಗಿ ತರಬೇತಿಯನ್ನು ನಡೆಸಿಕೊಟ್ಟರು. ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಜೇಸಿ ಅರುಣಾ ಜಯರಾಜ್ ಕಾರ್ಯಕ್ರಮವನ್ನು ಸಂಯೊಜಿಸಿದರು. ಜೇಸಿ ರಜತ್ ಮೋರ್ತಾಜೆ ತರಬೇತುದಾರರನ್ನು ಪರಿಚಯಿಸಿದರು. ಕಾರ್ಯದರ್ಶಿ ಶೈಲೇಶ್ ಕೆ ಇವರು ವಂದಿಸಿದರು.


ತರಬೇತಿ ಕಾರ್ಯಕ್ರಮದಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ , ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್, ನಿಕಟ ಪೂರ್ವಾಧ್ಯಕ್ಷರಾದ ರಂಜಿತ್ ಎಚ್‌ಡಿ ಮತ್ತು ಪೂರ್ವಾಧ್ಯಕ್ಷರು, ಜೇಸಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya
error: Content is protected !!