23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಜೇಸಿ ಭವನದಲ್ಲಿ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಸಲಾಯಿತು.
ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ತರಬೇತುದಾರರಾಗಿ ವಲಯ ಉಪಾಧ್ಯಕ್ಷ ಜೆಎಫ್ಎಮ್ ರಂಜಿತ್ ಎಚ್‌ಡಿ ಇವರು ಜೆಸಿಐ ರಾಷ್ಟ್ರೀಯ ಮತ್ತು ವಲಯದ ಮಾರ್ಗದರ್ಶನ ಹಾಗೂ ಪದಾಧಿಕಾರಿಗಳ ಕರ್ತವ್ಯ ಮತ್ತು ಘಟಕದ ನಿರ್ವಹಣೆ ಕುರಿತು ತರಬೇತಿಯನ್ನು ನೀಡಿದರು.

ವೇದಿಕೆಯಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ ಮತ್ತು ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್ ಉಪಸ್ಥಿತರಿದ್ದರು.

ಜೇಸಿ ರಜತ್ ಮೋರ್ತಾಜೆ ಇವರು ವೇದಿಕೆ ಆಹ್ವಾನಿಸಿ, ಕಾರ್ಯಕ್ರಮ ಸಂಯೋಜಕ ಜೇಸಿ ರಕ್ಷಿತ್ ಅಂಡಿಂಜೆ ತರಬೇತುದಾರರನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಜೇಸಿ ರಾಮಕೃಷ್ಣ ಶರ್ಮ ಧನ್ಯವಾದ ಸಲ್ಲಿಸಿದರು.

ಸಭಾಧ್ಯಕ್ಷರು ಸಭೆಯನ್ನು 3 ನೇ ಪದಾಧಿಕಾರಿಗಳ ಸಭೆಗೆ ಮುಂದೂಡಿದರು. ತರಬೇತಿ ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya
error: Content is protected !!