32.1 C
ಪುತ್ತೂರು, ಬೆಳ್ತಂಗಡಿ
May 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

ಬೆಳ್ತಂಗಡಿ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿದ ಘಟನೆ ಅತ್ಯಂತ ಅಮಾನವೀಯವಾದುದು. ಇದು ನಾಗರಿಕ ಸಮಾಜದ ಅನಾಗರಿಕ ವರ್ತನೆಯ ಪರಮಾವಧಿಯಾಗಿದೆ. ವಿದ್ಯಾವಂತ ಜಿಲ್ಲೆಯಲ್ಲಿ , ಅಜ್ಞಾನಿಗಳು ಇನ್ನೂ ಜೀವಂತವಿರುವುದಕ್ಕೆ ಉತ್ತಮ ಉದಾಹರಣೆ. ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡುವ ಬದಲಾಗಿ ಘಟನೆಯನ್ನು ತಡೆಯಲು ಪ್ರಯತ್ನಿಸದಿರುವುದು ಮಾನವೀಯತೆ ಸತ್ತಿರುವುದಕ್ಕೆ ಸಾಕ್ಷಿ. ಘಟನೆಯಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮಲ್ಪೆ ಪೋಲಿಸರ ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸಬೇಕು . ಘಟನೆ ನಡೆದು ಒಂದು ದಿನ ತಡವಾಗಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ.

ಈ ಹಿಂದೆ ಬೆತ್ತಲೆ ಪ್ರಕರಣದಲ್ಲಿ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಘಟನೆಯ ನಂತರ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸುವ ಮೂಲಕ ಮತ್ತೊಮ್ಮೆ ಕರಾವಳಿಗರು ಜಗತ್ತಿನ ಮುಂದೆ ತಲೆ ತಗ್ಗಿಸುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಬೇಕು. ಶೇಖರ್ ಲಾಯಿಲಸಂಚಾಲಕಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!