25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

ಬೆಳ್ತಂಗಡಿ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿದ ಘಟನೆ ಅತ್ಯಂತ ಅಮಾನವೀಯವಾದುದು. ಇದು ನಾಗರಿಕ ಸಮಾಜದ ಅನಾಗರಿಕ ವರ್ತನೆಯ ಪರಮಾವಧಿಯಾಗಿದೆ. ವಿದ್ಯಾವಂತ ಜಿಲ್ಲೆಯಲ್ಲಿ , ಅಜ್ಞಾನಿಗಳು ಇನ್ನೂ ಜೀವಂತವಿರುವುದಕ್ಕೆ ಉತ್ತಮ ಉದಾಹರಣೆ. ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡುವ ಬದಲಾಗಿ ಘಟನೆಯನ್ನು ತಡೆಯಲು ಪ್ರಯತ್ನಿಸದಿರುವುದು ಮಾನವೀಯತೆ ಸತ್ತಿರುವುದಕ್ಕೆ ಸಾಕ್ಷಿ. ಘಟನೆಯಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮಲ್ಪೆ ಪೋಲಿಸರ ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸಬೇಕು . ಘಟನೆ ನಡೆದು ಒಂದು ದಿನ ತಡವಾಗಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ.

ಈ ಹಿಂದೆ ಬೆತ್ತಲೆ ಪ್ರಕರಣದಲ್ಲಿ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಘಟನೆಯ ನಂತರ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸುವ ಮೂಲಕ ಮತ್ತೊಮ್ಮೆ ಕರಾವಳಿಗರು ಜಗತ್ತಿನ ಮುಂದೆ ತಲೆ ತಗ್ಗಿಸುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಬೇಕು. ಶೇಖರ್ ಲಾಯಿಲಸಂಚಾಲಕಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!