September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

ಬೆಳ್ತಂಗಡಿ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿದ ಘಟನೆ ಅತ್ಯಂತ ಅಮಾನವೀಯವಾದುದು. ಇದು ನಾಗರಿಕ ಸಮಾಜದ ಅನಾಗರಿಕ ವರ್ತನೆಯ ಪರಮಾವಧಿಯಾಗಿದೆ. ವಿದ್ಯಾವಂತ ಜಿಲ್ಲೆಯಲ್ಲಿ , ಅಜ್ಞಾನಿಗಳು ಇನ್ನೂ ಜೀವಂತವಿರುವುದಕ್ಕೆ ಉತ್ತಮ ಉದಾಹರಣೆ. ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡುವ ಬದಲಾಗಿ ಘಟನೆಯನ್ನು ತಡೆಯಲು ಪ್ರಯತ್ನಿಸದಿರುವುದು ಮಾನವೀಯತೆ ಸತ್ತಿರುವುದಕ್ಕೆ ಸಾಕ್ಷಿ. ಘಟನೆಯಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮಲ್ಪೆ ಪೋಲಿಸರ ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸಬೇಕು . ಘಟನೆ ನಡೆದು ಒಂದು ದಿನ ತಡವಾಗಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ.

ಈ ಹಿಂದೆ ಬೆತ್ತಲೆ ಪ್ರಕರಣದಲ್ಲಿ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಘಟನೆಯ ನಂತರ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸುವ ಮೂಲಕ ಮತ್ತೊಮ್ಮೆ ಕರಾವಳಿಗರು ಜಗತ್ತಿನ ಮುಂದೆ ತಲೆ ತಗ್ಗಿಸುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಬೇಕು. ಶೇಖರ್ ಲಾಯಿಲಸಂಚಾಲಕಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿದ ಬಿಷಪ್ ಜೇಮ್ಸ್ ಪಟ್ಟೇರಿಯಲ್ ರವರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!