25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

ಬೆಳ್ತಂಗಡಿ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿದ ಘಟನೆ ಅತ್ಯಂತ ಅಮಾನವೀಯವಾದುದು. ಇದು ನಾಗರಿಕ ಸಮಾಜದ ಅನಾಗರಿಕ ವರ್ತನೆಯ ಪರಮಾವಧಿಯಾಗಿದೆ. ವಿದ್ಯಾವಂತ ಜಿಲ್ಲೆಯಲ್ಲಿ , ಅಜ್ಞಾನಿಗಳು ಇನ್ನೂ ಜೀವಂತವಿರುವುದಕ್ಕೆ ಉತ್ತಮ ಉದಾಹರಣೆ. ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡುವ ಬದಲಾಗಿ ಘಟನೆಯನ್ನು ತಡೆಯಲು ಪ್ರಯತ್ನಿಸದಿರುವುದು ಮಾನವೀಯತೆ ಸತ್ತಿರುವುದಕ್ಕೆ ಸಾಕ್ಷಿ. ಘಟನೆಯಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮಲ್ಪೆ ಪೋಲಿಸರ ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸಬೇಕು . ಘಟನೆ ನಡೆದು ಒಂದು ದಿನ ತಡವಾಗಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ.

ಈ ಹಿಂದೆ ಬೆತ್ತಲೆ ಪ್ರಕರಣದಲ್ಲಿ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಘಟನೆಯ ನಂತರ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸುವ ಮೂಲಕ ಮತ್ತೊಮ್ಮೆ ಕರಾವಳಿಗರು ಜಗತ್ತಿನ ಮುಂದೆ ತಲೆ ತಗ್ಗಿಸುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಬೇಕು. ಶೇಖರ್ ಲಾಯಿಲಸಂಚಾಲಕಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya
error: Content is protected !!